Karunadu Studio

ಕರ್ನಾಟಕ

Yusuf Pathan: ಬಂಗಾಳ ಹೊತ್ತಿ ಇರಿಯುತ್ತಿರುವಾಗಲೇ “ಗುಡ್‌ ಚಾಯ್‌” ಎಂದು ಪೋಸ್‌ ಕೊಟ್ಟ ಯೂಸುಫ್ ಪಠಾಣ್ – Kannada News | Yusuf Pathan’s “Good Chai” Post Slammed As Bengal Simmers After Violence


ಕೊಲ್ಕತ್ತಾ: ವಕ್ಫ್ (ತಿದ್ದುಪಡಿ) ಕಾಯ್ದೆಯ ಹಿಂಸಾಚಾರ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದಿದ್ದೆ. ಈ ವರೆಗೆ ಬಂಗಾಳದಲ್ಲಿ ಮೂವರು ಮೃತಪಟಿದ್ದಾರೆ. ಇದೀಗ ಹಿಂಸಾಚಾರದಿಂದಾಗಿ ಬಂಗಾಳದ ಮುರ್ಷಿದಾಬಾದ್ ಕುದಿಯುತ್ತಿರುವಾಗ, ಸ್ಥಳೀಯ ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ವಿಶ್ರಾಂತಿ ಪಡೆಯುತ್ತಾ ಚಹಾ ಸೇವಿಸುತ್ತಿರುವ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಾಗಿ ಟೀಕೆಗೆ ಗುರಿಯಾಗಿದ್ದಾರೆ. ಪಠಾಣ್ ಅವರ ಕ್ಷೇತ್ರದ ಭಾಗವಾಗಿಲ್ಲದಿದ್ದರೂ, ಮುರ್ಷಿದಾಬಾದ್ ಅವರ ಪಕ್ಕದ ಕ್ಷೇತ್ರವೇ ಆಗಿದೆ. ಸಂಸದ ಈ ಪೋಸ್ಟ್‌ನನ್ನು ಶೇರ್‌ ಮಾಡಿದ ಕೂಡಲೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ದಿನಗಳ ಹಿಂದೆ ಶ್ರೀ ಪಠಾಣ್ ಅವರು ಇನ್ಸ್ಟಾಗ್ರಾಮ್ ನಲ್ಲಿ ಮೂರು ಚಿತ್ರಗಳನ್ನು ಹಂಚಿಕೊಂಡಿದ್ದರು, ಅದರಲ್ಲಿ ಅವರು ಒಳ್ಳೆಯ ಚಹಾ ಮತ್ತು ಶಾಂತ ಪರಿಸರ ಈ ಕ್ಷಣದಲ್ಲಿ ಮುಳುಗಿದ್ದೇನೆ” ಎಂಬ ಶೀರ್ಷಿಕೆಯೊಂದಿಗೆ ಶೇರ್‌ ಮಾಡಿದ್ದಾರೆ. ಸ್ವಲ್ಪ ಸಮಯದ ನಂತರ, ಮುರ್ಷಿದಾಬಾದ್ ಹಿಂಸಾಚಾರದಿಂದಾಗಿ ಉದ್ವಿಗ್ನಗೊಂಡಿದ್ದ ಸಮಯದಲ್ಲಿ ಸಾಮಾಜಿಕ ಮಾಧ್ಯಮ ಬಳಕೆದಾರರು ಅವರ ಪೋಸ್ಟ್‌ನನ್ನು ಟೀಕಿಸಿದ್ದಾರೆ. ಒಬ್ಬ ಬಳಕೆದಾರ ಕಮೆಂಟ್‌ ಮಾಡಿ, ನಿಮಗೆ ಏನಾದರೂ ನಾಚಿಕೆ ಇದೆಯೆ? ಎಂದು ಕೇಳಿದ್ದಾರೆ.

ತೃಣಮೂಲ ಸಂಸದರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ಮಮತಾ ಬ್ಯಾನರ್ಜಿ ಸರ್ಕಾರವು ಹಿಂಸಾಚಾರವನ್ನು ಪ್ರೋತ್ಸಾಹಿಸುತ್ತಿದೆ. ಸಂಸದ ಯೂಸುಫ್ ಪಠಾಣ್ ಚಹಾ ಹೀರುತ್ತಾ ಹಿಂದೂಗಳ ಹತ್ಯೆಯನ್ನು ಸಂತಸಿಸುತ್ತಿದ್ದಾರೆ. ಹಿಂದೂಗಳ ರಕ್ತ ಹರಿಯುತ್ತಿರುವಾಗ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಇದು ಟಿಎಂಸಿ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಲ್ಲ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.ಎಡಪಕ್ಷಗಳ ಬೆಂಬಲಿಗರು ಕೂಡ ಯೂಸುಫ್ ಪಠಾಣ್ ಅವರ ಪೋಸ್ಟ್‌ಗೆ ಟೀಕೆ ಮಾಡಿದ್ದಾರೆ. ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ ನಂತರ ಉತ್ತರ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲು ಕಲ್ಕತ್ತಾ ಹೈಕೋರ್ಟ್ ನಿನ್ನೆ ಆದೇಶಿಸಿದೆ.



ಈ ಸುದ್ದಿಯನ್ನೂ ಓದಿ: West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ರೈಲಿಗೆ ಕಲ್ಲು ತೂರಾಟ- ಕಚ್ಚಾ ಬಾಂಬ್‌ ಎಸೆದು ಅಟ್ಟಹಾಸ

ಮುರ್ಷಿದಾಬಾದ್ ಜಿಲ್ಲೆಯ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ ನಿರ್ದೇಶನವನ್ನು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಶನಿವಾರ ರಾತ್ರಿ ಶ್ಲಾಘಿಸಿದ್ದಾರೆ. ಮುರ್ಷಿದಾಬಾದ್ ಸೇರಿದಂತೆ ಬಂಗಾಳದ ಗಲಭೆ ಪೀಡಿತ ಪ್ರದೇಶಗಳಲ್ಲಿ ಸಿಎಪಿಎಫ್ ನಿಯೋಜಿಸುವ ಬಗ್ಗೆ ನನಗೆ ತಿಳಿಸಲಾಗಿದೆ. ಕಲ್ಕತ್ತಾ ಹೈಕೋರ್ಟ್ ಮಧ್ಯಪ್ರವೇಶಿಸಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರವನ್ನು ನೀಡಿದೆ ಎಂದು ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.





Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »