Karunadu Studio

ಕರ್ನಾಟಕ

Laxmi Hebbalkar: ಜಾತ್ರೆಯಲ್ಲಿ ಬಾಲ್ಯ ಸ್ನೇಹಿತೆ ಜತೆ ಸಂಭ್ರಮಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – Kannada News | Minister Laxmi Hebbalkar meets childhood friend


ಚಿಕ್ಕಹಟ್ಟಿಹೊಳಿ (ಖಾನಾಪುರ): ತವರು ಮನೆಯ ಜಾತ್ರೆಯಲ್ಲಿ ಭಾಗಿಯಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭಾನುವಾರ ತಮ್ಮ ಬಾಲ್ಯ ಸ್ನೇಹಿತೆಯ ಜತೆ ಸಂಭ್ರಮಿಸಿದರು. ವಿಶೇಷವೆಂದರೆ ಸಚಿವರ ಬಾಲ್ಯ ಸ್ನೇಹಿತೆ ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿ ಬರುವ ಅಂಗನವಾಡಿ ಕಾರ್ಯಕರ್ತೆ. ಚಿಕ್ಕಹಟ್ಟಿಹೊಳಿಯ ಶ್ರೀ ವೀರಭದ್ರ ದೇವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತವರು ಮನೆಯಲ್ಲಿದ್ದಾರೆ. ಭಾನುವಾರ ಅವರ ಶಾಲಾ ಹಾಗೂ ಬಾಲ್ಯ ಸ್ನೇಹಿತೆ ಗಂಗಮ್ಮ ಮನೆಗೆ ಆಗಮಿಸಿದ್ದರು. ಇಬ್ಬರೂ ಜತೆ ಕುಳಿತು ಊಟ ಸವಿದು, ಬಾಲ್ಯದ ದಿನಗಳನ್ನು ಮೆಲುಕು ಹಾಕಿ, ಪರಸ್ಪರ ಖುಷಿ ಹಂಚಿಕೊಂಡರು.

ವೃತ್ತಿಯಲ್ಲಿ ಗಂಗಮ್ಮ ಅಂಗನವಾಡಿ ಕಾರ್ಯಕರ್ತೆಯಾಗಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ರಾಜ್ಯದ ಸಚಿವೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರೂ, ಇಬ್ಬರ ಸ್ನೇಹದಲ್ಲಿ ಯಾವುದೇ ಅಂತರ ಕಾಣಲಿಲ್ಲ. ಬಾಲ್ಯದಲ್ಲಿದ್ದಂತೆ ಇಬ್ಬರೂ ಮಾತನಾಡುತ್ತಾ ಕಾಲಕಳೆದರು.

ಈ ಸುದ್ದಿಯನ್ನೂ ಓದಿ | Lorry owners Strike: ನಾಳೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ; ಡೀಸೆಲ್ ದರ, ಟೋಲ್ ಶುಲ್ಕ ಹೆಚ್ಚಳಕ್ಕೆ ವಿರೋಧ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೌಕರರಿಗೆ ವರ್ಷಕ್ಕೆ 30 ದಿನ ಗಳಿಕೆ ರಜೆ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸಮಾಜ ಕಲ್ಯಾಣ ಇಲಾಖೆಯಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಲಯ ಮೇಲ್ವಿಚಾರಕರು ಹಾಗೂ ನಿಲಯ ಪಾಲಕರನ್ನು ರಜಾ ರಹಿತ ಸಿಬ್ಬಂದಿ ಎಂದು ಪರಿಗಣಿಸಲಾಗಿದ್ದು, ಪ್ರತಿ ವರ್ಷ 30 ದಿನ ಗಳಿಕೆ (EL-Earned leave) ರಜೆಯನ್ನು ಪಡೆಯಲು ಮಂಜೂರಾತಿ ಆದೇಶವನ್ನು ನೀಡಲಾಗಿದೆ. ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಎಂ. ಬಾಟಿ ಆದೇಶ ಹೊರಡಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ನೌಕರರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರು ಇಲಾಖೆಯ ಆಯುಕ್ತರಿಗೆ ಬರೆದ ಪತ್ರದ ಅನ್ವಯ ಈ ಆದೇಶ ಹೊರಡಿಸಲಾಗಿದೆ. ನೌಕರರ ಸಂಘದ ಅಧ್ಯಕ್ಷರು ಬರೆದ ಪತ್ರದಲ್ಲಿ ಪ್ರಮುಖ 8 ಬೇಡಿಕೆಗಳನ್ನು ಸಲ್ಲಿಸಿದ್ದು, ಅದರಲ್ಲಿ 2ನೇ ಬೇಡಿಕೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಮೇಲ್ವಿಚಾರಕರು ಮತ್ತು ನಿಲಯ ಪಾಲಕರನ್ನು ರಜಾ ರಹಿತ ಇಲಾಖಾ ವ್ಯಾಪ್ತಿಯಲ್ಲಿ ತರುವುದು ಆಗಿದೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಎರಡು ಇಲಾಖೆಗಳ ವಿದ್ಯಾರ್ಥಿನಿಲಯಗಳ ಸಿಬ್ಬಂದಿ ಕರ್ತವ್ಯ ಹಾಗೂ ಜವಾಬ್ದಾರಿಗಳು ಒಂದೇ ಸಮಾನಾಂತರವಾಗಿದ್ದು, ಸರ್ಕಾರದ ಸವಲತ್ತುಗಳನ್ನು ನೀಡುವಲ್ಲಿ ಈ ರೀತಿಯ ತಾರತಮ್ಯವಿರುವುದು ಸಮಂಜಸವಾಗಿರುವುದಿಲ್ಲ. ಆದ್ದರಿಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೌಕರರನ್ನು ರಜಾ ಸಹಿತ ಇಲಾಖಾ ನೌಕರರ ಬದಲಾಗಿ, ರಜಾ ರಹಿತ ಇಲಾಖಾ ನೌಕರರೆಂದು ಪರಿಗಣಿಸಲು ನೌಕರರ ಸಂಘದ ಅಧ್ಯಕ್ಷರು ಕೋರಿದ್ದರು.

ಹೀಗಾಗಿ ಸಮಾಜ ಕಲ್ಯಾಣ ಇಲಾಖೆಯ ಆದೇಶದ ಮಾದರಿಯಲ್ಲಿಯೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಲಯ ಪಾಲಕರು ಹಾಗೂ ನಿಲಯ ಮೇಲ್ವಿಚಾರಕರನ್ನು ರಜಾ ರಹಿತ ಸಿಬ್ಬಂದಿ ಎಂದು ಪರಿಗಣಿಸಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳು, ನಿಯಮ 118ರ ಪ್ರಕಾರ ಪ್ರತಿ ವರ್ಷಕ್ಕೆ 30 ದಿನಗಳ ಗಳಿಕೆ ರಜೆಯನ್ನು ಪಡೆಯಲು ಮಂಜೂರಾತಿ ಆದೇಶವನ್ನು ನೀಡಿದೆ. ಈ ಆದೇಶಕ್ಕೆ ಆರ್ಥಿಕ ಇಲಾಖೆಯ ಸಹಮತಿ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಎಂ. ಬಾಟಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »