Karunadu Studio

ಕರ್ನಾಟಕ

Vishwavani Editorial: ಮತ್ತೆ ಬಾಲ ಬಿಚ್ಚಿದರೇ ಉಗ್ರರು? – Kannada News | Again, the terrorists cut off their tails?


ಕಣಿವೆ ರಾಜ್ಯದಲ್ಲಿ ಮತ್ತೆ ಕದಲಿಕೆ ಉಂಟಾಗಿದೆ. ಜಮ್ಮು-ಕಾಶ್ಮೀರದ ಅಖ್ನೂರ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಪಾಕಿಸ್ತಾನ ಮೂಲದ ಉಗ್ರರ ತಂಡವು ದೇಶದೊಳಗೆ ನುಸುಳುತ್ತಿರುವುದನ್ನು ಕಂಡ ಭದ್ರತಾ ಪಡೆಯ ಯೋಧರು ತಕ್ಷಣವೇ ಕಾರ್ಯಾಚರಣೆ ಆರಂಭಿ ಸಿದ್ದಕ್ಕೆ ಉಗ್ರರೂ ಪ್ರತಿಯಾಗಿ ಗುಂಡು ಹಾರಿಸಿದರು ಎಂದು ತಿಳಿದು ಬಂದಿದೆ. ಆದರೆ ಉಭಯ ಪಾಳಯಗಳ ನಡುವೆ ನಡೆದ ಈ ಗುಂಡಿನ ಚಕಮಕಿಯ ವೇಳೆ ಭಾರತೀಯ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದು ನೋವಿನ ಸಂಗತಿ. ಈ ಬೆಳವಣಿಗೆಯನ್ನು ಹಗುರವಾಗಿ ಪರಿಗಣಿಸುವಂತಿಲ್ಲ. ಏಕೆಂದರೆ, ಜಮ್ಮು-ಕಾಶ್ಮೀರ ಭಾಗದಲ್ಲಿ ಕೆಲ ವರ್ಷದಿಂದ ಉಗ್ರರ ಉಪಟಳ ಕಡಿಮೆಯಾಗಿತ್ತು ಮತ್ತು ಇದಕ್ಕೆ ಕೇಂದ್ರ ಸರಕಾರವು ಕಾಲಾನುಕಾಲಕ್ಕೆ ಕೈಗೊಂಡಿದ್ದ ಕಟ್ಟುನಿಟ್ಟಿನ ಕ್ರಮಗಳು ಕಾರಣವಾಗಿದ್ದವು.

ಈಗ ಉಗ್ರರು ಮತ್ತೆ ಬಾಲ ಬಿಚ್ಚಿರುವುದನ್ನು ನೋಡಿದರೆ, ಪಾಕಿಸ್ತಾನ ಮತ್ತು ಚೀನಾದಂಥ ಗಡಿಯಾಚೆಗಿನ ಕುತ್ಸಿತ ಶಕ್ತಿಗಳ ಚಿತಾವಣೆ ಈ ಬೆಳವಣಿಗೆಯ ಹಿಂದಿರಬಹುದೇ ಎಂಬ ಶಂಕೆ ಮೂಡುತ್ತದೆ.

ಇದನ್ನೂ ಓದಿ: Vishwavani Editorial: ಈ ವಿಷಯದಲ್ಲೂ ರಾಜಕೀಯವೇ?!

ಏಕೆಂದರೆ, ನೆರೆಯ ಬಾಂಗ್ಲಾದೇಶದಲ್ಲಿ ಪ್ರತಿಭಟನೆಯ ನೆಪದಲ್ಲಿ ಹಿಂದೂ ಸಮುದಾಯದವರ ಮೇಲೆ ಏಕಾಏಕಿ ನಡೆದ ಹಿಂಸಾಚಾರಗಳು ಹಾಗೂ ಮನೆಗಳ ಲೂಟಿಗಳು, ಈಶಾನ್ಯ ರಾಜ್ಯ ಮಣಿಪುರದಲ್ಲಿನ ಜನಾಂಗೀಯ ಸಂಘರ್ಷ ತಾರಕಕ್ಕೇರಿದ್ದು ಇವೆಲ್ಲದರ ಹಿಂದೆ ಇಂಥ ಮಗ್ಗುಲು ಮುಳ್ಳುಗಳ ಕುಮ್ಮಕ್ಕು ಇದೆ ಎನ್ನಲಾಗುತ್ತಿದೆ. ಭಾರತದ ಭದ್ರತೆ, ಸಮಗ್ರತೆ ಮತ್ತು ಸಾರ್ವಭೌಮತೆಗಳ ಮೇಲೆ ವಕ್ರದೃಷ್ಟಿ ಬೀರಿ ಅವಕ್ಕೆ ಸಂಚಕಾರ ತಂದೊಡ್ಡಲು ಹವಣಿಸುತ್ತಿರುವ ಈ ಎರಡು ದೇಶಗಳ ಎಲ್ಲ ಕಸರತ್ತುಗಳನ್ನು ಭಾರತವು ವಿಫಲಗೊಳಿಸಬೇಕಾದ ಅಗತ್ಯ ಹಿಂದೆಂದಿಗಿಂತ ಹೆಚ್ಚಾಗಿದೆ ಎಂಬುದಕ್ಕೆ ಜಮ್ಮು-ಕಾಶ್ಮೀರದಲ್ಲಿ ನಡೆದಿರುವ ಈ ಚಕಮಕಿಯೇ ಸಾಕ್ಷಿ.

ಕಿಶ್‌ತ್ವಾರ ಅರಣ್ಯದಲ್ಲಿ ಇಬ್ಬರು ಉಗ್ರರನ್ನು ಭಾರತ ಸೇನೆಯು ಹೊಡೆದು ಉರುಳಿಸಿದೆ ಎಂಬುದು ಸಮಾಧಾನಕರ ಸಂಗತಿಯಾದರೂ, ಈ ಕಾರ್ಯಾಚರಣೆಗೆ ಮತ್ತಷ್ಟು ವೇಗವನ್ನು ತುಂಬಬೇಕಿದೆ ಎಂಬುದನ್ನು ಮರೆಯಲಾಗದು. ಅದು ಈ ಕ್ಷಣದ ಅನಿವಾರ್ಯತೆಯೂ ಹೌದು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »