Karunadu Studio

ಕರ್ನಾಟಕ

Soil collapse: ಒಳ ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು – Kannada News | Two labourers killed in mud collapse during sewerage work


ಬೆಳಗಾವಿ: ಒಳ ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ (Soil collapse) ಬೆಳಗಾವಿಯ ಕನಕದಾಸ ಸರ್ಕಲ್ ಬಳಿ ನಡೆದಿದೆ. ಮೂಡಲಗಿ ತಾಲೂಕಿನ ಪಟಗುಂಡಿ ಗ್ರಾಮದ ಬಸವರಾಜ ದುಂಡಪ್ಪ ಸರವಿ(38), ಶಿವಲಿಂಗ ಮಾರುತಿ ಸರವಿ (20) ಮೃತರು. ಮಣ್ಣಲ್ಲಿ ಸಿಲುಕಿಕೊಂಡಿದ್ದ ಇಬ್ಬರ ರಕ್ಷಣೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದರು‌. ಆದರೆ, ಅಷ್ಟರ ವೇಳೆಗೆ ಮಣ್ಣಿನಡಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ರಾಜ್ಯ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯಿಂದ ಕಾಮಗಾರಿ ಕೈಗೊಳ್ಳಲಾಗಿತ್ತು. ಜೆಸಿಬಿ ಬಳಸಿ ಒಳ ಚರಂಡಿ ಕಾಮಗಾರಿ ಮಾಡುವಾಗ ಈ ಅವಘಡ ಸಂಭವಿಸಿದೆ. ಅಪಾರ ಪ್ರಮಾಣದ ಮಣ್ಣು ಕುಸಿದ ಪರಿಣಾಮ ಇವರಿಬ್ಬರೂ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Reels Case: ಮಚ್ಚು ಹಿಡಿದು ರೀಲ್ಸ್‌ ಮಾಡಿದ ರಜತ್‌ಗೆ ಮತ್ತೆ ಪೊಲೀಸ್‌ ನೋಟೀಸ್

ಮಲಗಿದ್ದ ತಂದೆ, ತಾಯಿ, ಅಕ್ಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ!

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ (Bengaluru Crime News) ನಡೆದಿದ್ದು, ವಿದ್ಯಾರ್ಥಿಯೊಬ್ಬ (Student) ಮನೆಯಲ್ಲಿ ಮಲಗಿದ್ದ ತಂದೆ, ತಾಯಿ, ಅಕ್ಕನಿಗೆ ಯದ್ವಾತದ್ವಾ ಚಾಕುವಿನಿಂದ (Assault Case) ಇರಿದಿದ್ದಾನೆ. ಸೋಲದೇವಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇದರಹಳ್ಳಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಮಲಗಿದ್ದ ಅಕ್ಕ, ತಾಯಿ, ತಂದೆ ಮೇಲೆ ಮಗ ಇದ್ದಕ್ಕಿದ್ದಂತೆ ಚಾಕು ಹಿಡಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಮಗನ ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ.

ವಿನಾಯಕ ಲೇಔಟ್ ನಿವಾಸಿ ಕೃಷ್ಣಮೂರ್ತಿ (51) ಪಾರ್ವತಮ್ಮ (48) ನಯನಾ (24) ಹಲ್ಲೆಗೆ ಒಳಗಾದವರು. ಮೂವರಿಗೂ ಕೂಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಹರ್ಷ ಎಂಬ ವಿದ್ಯಾರ್ಥಿ ತನ್ನ ಪೋಷಕರ ಮೇಲೆಯೇ ಈ ಕೃತ್ಯ ಎಸಗಿದ್ದಾನೆ. ಚಾಕುವಿನಿಂದ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾನೆ. ಕಾರದ ಪುಡಿ ಎರಚಿ ಮಗನ ಕೃತ್ಯ ತಡೆಯಲು ಮುಂದಾದರೂ ಆತ ಹಲ್ಲೆ ಮಾಡುವುದನ್ನು ಬಿಡಲಿಲ್ಲ. ವಿಚಾರ ತಿಳಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಗಿಲು ಒಡೆದು ಮನೆಯವರನ್ನು ರಕ್ಷಿಸಿದ್ದಾರೆ. ಈತ ಮಾನಸಿಕ ಅಸ್ವಸ್ಥನೇ, ಕೌಟುಂಬಿಕ ಕಲಹದ ಕಾರಣದಿಂದ ಹೀಗೆ ಮಾಡಿದ್ದಾನೆಯೇ ಎಂಬುದು ತಿಳಿದು ಬರಬೇಕಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »