Karunadu Studio

ಕರ್ನಾಟಕ

ಹೊಸ ಸಂಘರ್ಷಕ್ಕೆ ಕಾರಣವಾಯ್ತು 1ನೇ ತರಗತಿ ಸೇರ್ಪಡೆ ವಯೋಮಿತಿ ಸಡಿಲಿಕೆ….!?


ಬೆಂಗಳೂರು

    ಒಂದನೇ ತರಗತಿಗೆ ಆರು ವರ್ಷ ಕಡ್ಡಾಯ ಎಂಬ ವಿಚಾರ ಕರ್ನಾಟಕದಲ್ಲಿ ಬಹಳ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ನಿನ್ನೆ ಕರ್ನಾಟಕ ಶಿಕ್ಷಣ ಇಲಾಖೆ  ವಯೋಮಿತಿ ಸಡಿಲಿಕೆ ಮಾಡಿತ್ತು. ಒಂದನೇ ತರಗತಿ ಸೇರಲು 5 ವರ್ಷ 5 ತಿಂಗಳು ಆಗಿರಬೇಕು ಎಂದು ಹೇಳಿತ್ತು. ಆದರೆ ಈ ವಯೋಮಿತಿ ಸಡಲಿಕೆ ಮತ್ತೊಂದು ಹೊಸ ಸಂಘರ್ಷಕ್ಕೆ ಕಾರಣವಾಗಿದ್ದು, ಮುಂದಿನ ವರ್ಷಕ್ಕೂ ವಯೋಮಿತಿ ಸಡಲಿಕೆ ನೀಡುವಂತೆ ಪೋಷಕರು ಒತ್ತಾಯಿಸಿದ್ದಾರೆ.

   ಸರ್ಕಾರ ಈ ವರ್ಷ ಮಾತ್ರ 5.5 ವಯೋಮಿತಿ ಸಡಲಿಕೆ ಮಾಡಿದೆ. ಜೊತೆಗೆ ಯುಕೆಜಿ ಪೂರ್ಣಗೊಳಿಸಿರಬೇಕು ಅಂತಿದೆ. ಆದರೆ ಈಗಾಗಲೇ ಸರ್ಕಾರದ ಆದೇಶ ಪಾಲನೆಯಂತೆ ಎಲ್​ಕೆಜಿ ಶಾಲೆಗೆ ದಾಖಲಾದ ಮಕ್ಕಳಿಗೆ ದೊಡ್ಡ ಸಂಕಷ್ಟ ಶುರುವಾಗಿದೆ. ಸದ್ಯ ಎಲ್​ಕೆಜಿ ಮುಗಿಸಿರುವ ವಿದ್ಯಾರ್ಥಿಗಳು ಈ ವರ್ಷ ಯುಕೆಜಿ ಸೇರಿಕೊಳ್ಳುತ್ತಿದ್ದಾರೆ. ಮುಂದಿನ ವರ್ಷ ಈ ಮಕ್ಕಳು ಒಂದನೇ ತರಗತಿಗೆ ಬರುತ್ತಾರೆ. ಆದರೆ ಈ ಮಕ್ಕಳಿಗೆ ಕಡ್ಡಾಯ 6 ವರ್ಷ ಪೂರ್ಣವಾಗುವುದಿಲ್ಲ. ಇವರೆಲ್ಲಾ ಮತ್ತೆ ಯುಕೆಜಿಗೆ ಸೇರಬೇಕಾದ ಸ್ಥಿತಿ ಎದುರಾಗಿದೆ. 

   ಮತ್ತೊಂದು ಕಡೆ ಕಳೆದ ವರ್ಷ ವಯೋಮಿತಿ ಕಡಿಮೆ ಎನ್ನುವ ಕಾರಣಕ್ಕೆ ಸಾವಿರಾರು ಪೋಷಕರಿಗೆ ಒಂದನೇ ತರಗತಿಗೆ ದಾಖಲಾತಿ ಸಿಕ್ಕಿರಲಿಲ್ಲ. ಲಕ್ಷಂತಾರ ರೂ. ಶುಲ್ಕ ಕಟ್ಟಿ ಮರಳಿ ಯಕೆಜಿಗೆ ಸೇರಿಸಿದ್ದರು. ಸಾಕಷ್ಟು ಖಾಸಗಿ ಶಾಲೆಗಳು ಕೂಡ ದಾಖಲಾತಿ ಮಾಡಿಸಿಕೊಂಡಿರಲಿಲ್ಲ. ಹೀಗಾಗಿ ಪೋಷಕರು ಕಳೆದ ಶೈಕ್ಷಣಿಕ ಸಾಲಿನಲ್ಲಿ ಒಂದು ವರ್ಷ ಎಲ್​ಕೆಜಿಯಲ್ಲಿ ಶಿಕ್ಷಣ ಮುಂದುವರೆಸಿದ್ದರು.

ಈ ವರ್ಷ ವಯೋಮಿತಿಯ ಅಹರ್ತೆಯ ಮೇಲೆ ಒಂದನೇ ತರಗತಿಯ ದಾಖಲಾತಿಗೆ ಮುಂದಾಗಿದ್ದಾರೆ. ಆದರೆ ಸರ್ಕಾರ ಈ ವರ್ಷ 5.5 ವರ್ಷಕ್ಕೆ ಅವಕಾಶ ನೀಡಿದೆ. ಕಳೆದ ವರ್ಷ ವಯೋಮಿತಿ ಕಾರಣಕ್ಕೆ ಒಂದನೇ ತರಗತಿಯಿಂದ ವಂಚಿತರಾದ ಪೋಷಕರು, ಇದೀಗ ನಮಗೆ ನೇರವಾಗಿ ಮುಂದಿನ ತರಗತಿಗೆ ಬಡ್ತಿ ಕೊಡಿ ಅಂತಿದ್ದಾರೆ. ಜೊತೆಗೆ ಈಗಾಗಲೇ ಯುಕೆಜಿಯಲ್ಲಿ ಓದುತ್ತಿರುವ ಪೋಷಕರು ಮುಂದಿನ ವರ್ಷಕ್ಕೂ ಅವಕಾಶ ನೀಡಿ ಅಂತಿದ್ದಾರೆ. 

   ಸದ್ಯ ಈ ವಯೋಮಿತಿ ಸಡಿಲಿಕೆ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯಮಾಡಿದೆ. ಮುಂದಿನ ವರ್ಷ ಈ ನಿಯಮ ಸಡಲಿಕೆ ಅನ್ವಯಿಸುವುದಿಲ್ಲ ಅಂತಾ  ಶಿಕ್ಷಣ ಸಚಿವ ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಮುಂದಿನ ವರ್ಷದಿಂದ ಶಾಲಾ ದಾಖಲಾತಿ ಹಾಗೂ ವಯೋಮಿತಿ ಎಸ್‌ಇಪಿ ನಿಯಮದಂತೆ ನಡೆಯಲಿದೆ ಎಂದು ಕೂಡ ಹೇಳಿದ್ದಾರೆ. ಇನ್ನು ಶಾಲಾ ಶಿಕ್ಷಣ ಇಲಾಖೆಯ ನಡೆಗೆ ಕೆಲ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »