Karunadu Studio

ಕರ್ನಾಟಕ

ಮಾಂಸಾಹಾರ ಸೇವನೆ ಬಗ್ಗೆ ಅಪಾರ್ಟ್‌ಮೆಂಟ್‌ನಲ್ಲಿ ಮಾರಾಮಾರಿ!


ಮುಂಬೈ: 

     ಮಾಂಸಾಹಾರ ಸೇವನೆ ಗಲಾಟೆಗೆ ಕಾರಣವಾದ ಘಟನೆ ಮುಂಬೈ  ನಗರದ ಘಾಟ್ಕೋಪರ್ ಪ್ರದೇಶದಲ್ಲಿ ಗುರುವಾರ ನಡೆದಿದೆ. ಇದು ಗುಜರಾತಿ ಮತ್ತು ಮರಾಠಿ  ಸಮುದಾಯದ ನಡುವೆ ಉದ್ವಿಗ್ನತೆಗೆ ಕಾರಣವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಬೇಕಾಯಿತು. ಮಾಂಸಾಹಾರಿಗಳು ಕೊಳಕು ಎಂದು ಹೇಳಿರುವುದು ಈ ಉದ್ವಿಗ್ನತೆಗೆ ಮುಖ್ಯ ಕಾರಣವಾಗಿತ್ತು. ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ವಾಸವಿರುವ ಕುಟುಂಬಗಳು ಏನು ತಿನ್ನಬಹುದು ಎನ್ನುವುದರ ಮೇಲೆ ಯಾವುದೇ ನಿರ್ಬಂಧವಿಲ್ಲ. ಆದರೂ ಈ ಗಲಾಟೆ ನಡೆದಿದೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

    ಮಾಂಸಾಹಾರ ಸೇವನೆ ಬಗ್ಗೆ ಗುಜರಾತಿ ಸಮುದಾಯ ಸದಸ್ಯರು ಮತ್ತು ಮರಾಠಿ ಮಾತನಾಡುವ ನಿವಾಸಿಗಳ ಮಧ್ಯೆ ಉದ್ವಿಗ್ನತೆಗೆ ಕಾರಣವಾಗಿದೆ. ಇದನ್ನು ಪೊಲೀಸರು ಮಧ್ಯಪ್ರವೇಶಿಸಿ ಶಮನಗೊಳಿಸಿದರು. ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ಮಾಂಸ ಮತ್ತು ಮೀನು ಸೇವಿಸಿದ್ದಕ್ಕಾಗಿ ಕೆಲವು ಮರಾಠಿ ಕುಟುಂಬಗಳನ್ನು ಗುಜರಾತಿ ಸಮುದಾಯದ ನಿವಾಸಿಗಳು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂಬ ಆರೋಪದಿಂದ ಉದ್ವಿಗ್ನತೆ ಹೆಚ್ಚಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ವಿಡಿಯೋದಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ನ ಕೆಲವು ಕಾರ್ಯಕರ್ತರು ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ಗುಜರಾತಿ ಸಮುದಾಯದವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದನ್ನು ಕಾಣಬಹುದು. ಅವರು ಆಹಾರದ ಆಯ್ಕೆಗಳ ಬಗ್ಗೆ ಮರಾಠಿ ಕುಟುಂಬಗಳನ್ನು ಸಮರ್ಥಿಸಿಕೊಂಡರು. ಮರಾಠಿ ಮಾತನಾಡುವವರನ್ನು “ಕೊಳಕು” ಎಂದು ಕರೆದಿದ್ದಾರೆ. ಮನೆಯಲ್ಲಿ ಮಾಂಸ ಮತ್ತು ಮೀನು ಬೇಯಿಸುವುದಕ್ಕೆ ನಿರ್ಬಂಧಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎಂಎನ್‌ಎಸ್ ನಾಯಕ ರಾಜ್ ಪಾರ್ಟೆ ಅವರು ಗುಜರಾತಿ ಸಮುದಾಯದ ಕೆಲವು ನಿವಾಸಿಗಳನ್ನು ತರಾಟೆಗೆ ತೆಗೆದುಕೊಂಡರು.

    ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ಕುಟುಂಬಗಳು ಏನು ತಿನ್ನಬಹುದು ಎಂಬುದರ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ಸ್ಥಳೀಯರೊಬ್ಬರು ಹೇಳಿದರೂ ಪಾರ್ಟೆ ಅವರು ಮುಂಬೈನಂತಹ ನಗರದಲ್ಲಿ ಯಾರೂ ಇತರರ ಆಹಾರ ಪದ್ಧತಿಯ ಮೇಲೆ ನಿರ್ಬಂಧ ವಿಧಿಸಬಾರದು ಎಂದರು. ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ಕರೆ ಮಾಡಿದ್ದರಿಂದ ಅವರು ಬಂದು ಪರಿಸ್ಥಿತಿಯನ್ನು ನಿಯಂತ್ರಿಸಿದರು.

   ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಸ್ಥಳೀಯರು ಸಾಮರಸ್ಯದಿಂದ ಬದುಕುವಂತೆ ಮತ್ತು ಇತರರಿಗೆ ಕಿರುಕುಳ ನೀಡದಂತೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ರಾಜ್ ಪಾರ್ಟೆ ಅವರು ಅಪಾರ್ಟ್ಮೆಂಟ್ ಸಮಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರು. ಅಂದಿನಿಂದ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ಎರಡು ಬಣಗಳು ಹುಟ್ಟಿಕೊಂಡಿವೆ. ನಾವು ಎರಡೂ ಕಡೆಯವರೊಂದಿಗೆ ಮಾತನಾಡುತ್ತೇವೆ ಮತ್ತು ಈ ಆಂತರಿಕ ವಿಷಯವನ್ನು ಪರಿಹರಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

   ಮರಾಠಿ ಮಾತನಾಡುವ ನಿವಾಸಿಗಳು ತಮ್ಮ ಆಹಾರದ ಆದ್ಯತೆಗಳಿಂದಾಗಿ ಅಪಾರ್ಟ್ಮೆಂಟ್ ಸಂಕೀರ್ಣಗಳಲ್ಲಿ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ಈ ಹಿಂದೆಯೂ ಎಂಎನ್ಎಸ್ ಮತ್ತು ಶಿವಸೇನೆ ಆರೋಪಿಸಿತ್ತು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »