Karunadu Studio

ಕರ್ನಾಟಕ

Viral News: ವೃದ್ಧನ ಮೇಲೆ ರಣಭೀಕರ ಹಲ್ಲೆ; ಕೊನೆಗೆ ನಡೆದಿದ್ದು ಘನಘೋರ ಘಟನೆ! – Kannada News | Viral Video: A man who came out of the house was brutally assaulted


ನವದೆಹಲಿ: 67 ವರ್ಷದ ವ್ಯಕ್ತಿಯೊಬ್ಬನ ಮೇಲೆ ಅವನ ಮನೆಯ ಬಳಿ ಕಿಡಿಗೇಡಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ದೆಹಲಿಯ ಶಹದಾರಾದಲ್ಲಿ ಇತ್ತೀಚೆಗೆ ನಡೆದಿದೆ. ಪುರುಷರು ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ವಿಡಿಯೊ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral News) ಆಗಿದೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ನಂತರ ನಗರದ ಆಸ್ಪತ್ರೆಯಲ್ಲಿ ನಿಧನನಾಗಿದ್ದಾನಂತೆ. ಸುಮಾರು ಏಳು ಸೆಕೆಂಡುಗಳ ಈ ವೈರಲ್ ವಿಡಿಯೊದಲ್ಲಿ ಸತೀಶ್ ಚಂದ್ರ ಗುಪ್ತಾ ಎಂಬ ವೃದ್ಧನನ್ನು ಮನೆಯಿಂದ ಕೆಲವು ಹೆಜ್ಜೆ ದೂರದಲ್ಲಿ ತಡೆದು ನಿಲ್ಲಿಸಿದ ಪುರುಷರು ಗುಂಪೊಂದು ಆತನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಘಟನೆಯ ನಂತರ ಅವನ ಮಗ ಅವನನ್ನು ಆಸ್ಪತ್ರೆಗೆ ಕರೆದೊಯ್ದ ಚಿಕಿತ್ಸೆ ಕೊಡಿಸಿದ್ದಾನೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಮಾಹಿತಿ ಪ್ರಕಾರ, ಇತ್ತೀಚೆಗೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಗುಪ್ತಾ ವೈದ್ಯರ ಭೇಟಿಗಾಗಿ ಹೊರಗೆ ಹೋಗಿದ್ದಾಗ 4-5 ಜನರು ಅವರನ್ನು ಸುತ್ತುವರಿದು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡಲು ಆತ ನಿರಾಕರಿಸಿದಾಗ, ಅವನ ಮೇಲೆ ಹಲ್ಲೆ ಮಾಡಿದ್ದಾರಂತೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 105 (ಅಪರಾಧಿ ನರಹತ್ಯೆ), 115 (2) (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 126 (2) (ತಪ್ಪಾದ ಸಂಯಮ) ಮತ್ತು 3 (5) (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೂ ಪೊಲೀಸರು ಈಗಾಗಲೇ ನಾಲ್ವರನ್ನು ಬಂಧಿಸಿದ್ದಾರೆ ಮತ್ತು ಇನ್ನೂ ಕೆಲವರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹಾಗೇ ಪೊಲೀಸರು ಗುಪ್ತಾ ಅವರ ಶವವನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ರಾಜೀವ್ ಕುಮಾರ್ ಜೈನ್ ಒಂದು ವಾರದ ಹಿಂದೆ ಗುಪ್ತಾ ಅವನಿಂದ 1 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾನಂತೆ. ರಾಜೀವ್ ಮತ್ತು ಅವನ ಪತ್ನಿ ಪಾಯಲ್ ಇಬ್ಬರೂ ಈ ಹಿಂದೆ ಯಾವುದೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದರು ಎನ್ನಲಾಗಿದೆ.

ಈ ಸುದ್ದಿಯನ್ನೂ ಓದಿ:Viral Video: ವ್ಯಾಘ್ರನ ಹಸಿವಿಗೆ ಹೆಬ್ಬಾವೇ ಫುಲ್‌ ಮೀಲ್ಸ್‌- ಆಮೇಲೇನಾಯ್ತು ಗೊತ್ತಾ? ಇಲ್ಲಿದೆ ಶಾಕಿಂಗ್‌ ವಿಡಿಯೊ

ಜನರ ಮೇಲೆ ಹಲ್ಲೆ ನಡೆಸಿದ ಘಟನೆಗಳು ಆಗಾಗ ದೆಹಲಿಯಲ್ಲಿ ನಡೆಯುತ್ತಿದ್ದು, ಈ ಹಿಂದೆ, ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ 21 ವರ್ಷದ ವ್ಯಕ್ತಿ ವಿವಾಹಿತ ಮಹಿಳೆಯೊಂದಿಗೆ ರಾಜಿ ಮಾಡಿಕೊಳ್ಳುವಾಗ ರೆಡ್‍ಹ್ಯಾಂಡ್‍ ಆಗಿ ಹಿಡಿದ ಆಕೆಯ ಪತಿ ನಂತರ ಆ ವ್ಯಕ್ತಿಯನ್ನು ಥಳಿಸಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಅಜ್ಮತ್ ಎಂದು ಗುರುತಿಸಲಾಗಿದ್ದು, ಘಟನೆಯ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಮಾಹಿತಿ ಪ್ರಕಾರ, ಅಜ್ಮತ್ ಮನೆಗೆ ಹಿಂದಿರುಗಿದಾಗ ಸಂತ್ರಸ್ತ ರಿತಿಕ್ ಮತ್ತು ಅವನ ಹೆಂಡತಿ ಇಬ್ಬರೂ ಒಟ್ಟಿಗೆ ಇರುವುದನ್ನು ನೋಡಿದಾಗ, ಅವನು ಕೋಪಗೊಂಡು ಇಬ್ಬರನ್ನೂ ಕ್ರೂರವಾಗಿ ಥಳಿಸಿದ್ದನು. ಈ ವೇಳೆ ರಿತಿಕ್‍ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ್ದಾನಂತೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »