Karunadu Studio

ಕರ್ನಾಟಕ

GT vs KKR: ಶುಭಮನ್‌ ಗಿಲ್‌ ಅಬ್ಬರ, ಕೆಕೆಆರ್‌ ಎದುರು ಗುಜರಾತ್‌ ಟೈಟನ್ಸ್‌ಗೆ ಭರ್ಜರಿ ಜಯ! – Kannada News | Shubman Gill Fifty helps to Gujarat Titans beat Kolkata Knight Riders by 39 Runs in 39th Match of IPL


ಕೋಲ್ಕತಾ: ಶುಭಮನ್‌ ಗಿಲ್‌ (90 ರನ್‌) ಮತ್ತು ಸಾಯಿ ಸುದರ್ಶನ್‌ ( 52 ರನ್‌) ಸ್ಪೋಟಕ ಬ್ಯಾಟಿಂಗ್‌ ಹಾಗೂ ರಶೀದ್‌ ಖಾನ್‌ (25 ಕ್ಕೆ 2) ಮತ್ತು ಪ್ರಸಿಧ್‌ ಕೃಷ್ಣ (25 ಕ್ಕೆ 2) ಪರಿಣಾಮಕಾರಿ ಬೌಲಿಂಗ್‌ ನೆರವಿನಿಂದ ಗುಜರಾತ್‌ ಟೈಟನ್ಸ್‌ (Gujarat Titans) ತಂಡ, ಎದುರಾಳಿ ಕೋಲ್ಕತಾ ನೈಟ್‌ ರೈಡರ್ಸ್‌ (Kolkata Knight Riders) ವಿರುದ್ದ 39 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಆರನೇ ಗೆಲುವು ಪಡೆಯುವ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿತು. ಇನ್ನು ಐದನೇ ಸೋಲು ಅನುಭವಿಸಿದ ಅಜಿಂಕ್ಯ ರಹಾನೆ ನಾಯಕತ್ವದ ಕೆಕೆಆರ್‌ಗೆ ಪ್ಲೇಆಫ್ಸ್‌ ಹಾದಿ ಕಠಿಣವಾಗಿದೆ.

ಸೋಮವಾರ ಇಲ್ಲಿನ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟನ್ಸ್‌ ನೀಡಿದ್ದ 199 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಕೋಲ್ಕತಾ ನೈಟ್‌ ರೈಡರ್ಸ್‌, ಅಜಿಂಕ್ಯ ರಹಾನೆ (50) ಬಿಟ್ಟರೆ ಇನ್ನುಳಿದ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ಇದರ ಪರಿಣಾಮವಾಗಿ ಕೆಕೆಆರ್‌ ತನ್ನ ಪಾಲಿನ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 8 ವಿಕೆಟ್‌ಗಳ ನಷ್ಟಕ್ಕೆ 159 ರನ್‌ಗಳಿಗೆ ಸೀಮಿತವಾಯಿತು. ಆ ಮೂಲಕ ತವರು ಅಭಿಮಾನಿಗಳ ಎದುರು ಸೋಲು ಒಪ್ಪಿಕೊಂಡಿತು.

GT vs KKR: 90 ರನ್‌ಗೆ ಔಟ್‌ ಆಗಿ ವಿರಾಟ್‌ ಕೊಹ್ಲಿಯ ಅಗತ್ಯ ದಾಖಲೆ ಸರಿಗಟ್ಟಿದ ಶುಭಮನ್‌ ಗಿಲ್‌!

ಅಜಿಂಕ್ಯ ರಹಾನೆ ಅರ್ಧಶತಕ ವ್ಯರ್ಥ

ಸವಾಲಿನ ಮೊತ್ತದ ಗುರಿಯನ್ನು ಹಿಂಬಾಲಿಸಿದ ಕೋಲ್ಕತಾ ನೈಟ್‌ ರೈಡರ್ಸ್‌ಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ರೆಹಮಾನುಲ್ಲಾ ಗುರ್ಬಾಝ್‌ (1) ಹಾಗೂ ಸುನೀಲ್‌ ನರೇನ್‌ (17) ಕೆಕೆಆರ್‌ಗೆ ಉತ್ತಮ ಆರಂಭ ತಂದುಕೊಡುವಲ್ಲಿ ವಿಫಲರಾದರು. ಆದರೆ, ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದಿದ್ದ ಅಜಿಂಕ್ಯ ರಹಾನೆ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರಿ 36 ಎಸೆತಗಳಲ್ಲಿ 50 ರನ್‌ ಸಿಡಿಸಿದರು. ಆದರೆ, ಇವರಿಗೆ ಮತ್ತೊಂದು ತುದಿಯಲ್ಲಿ ಯಾರಿಂದಲೂ ಸೂಕ್ತ ಬೆಂಬಲ ಸಿಗಲಿಲ್ಲ. ಇದರ ಶ್ರೇಯ ಗುಜರಾತ್‌ ಟೈಟನ್ಸ್‌ ಬೌಲರ್‌ಗಳಿಗೆ ಸಲ್ಲಬೇಕು. ರಶೀದ್‌ ಖಾನ್‌, ಪ್ರಸಿಧ್‌ ಕೃಷ್ಣ ಸೇರಿದಂತೆ ಜಿಟಿ ಬೌಲರ್‌ಗಳು ಶಿಸ್ತುಬದ್ದ ದಾಳಿಯನ್ನು ಕೆಕೆಆರ್‌ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕಿದರು. ವೆಂಕಟೇಶ್‌ ಅಯ್ಯರ್‌, ರಿಂಕು ಸಿಂಗ್‌ ಹಾಗೂ ಆಂಡ್ರೆ ರಸೆಲ್‌ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು.

ಗುಜರಾತ್‌ ಟೈಟನ್ಸ್‌ ಪರ ಬೌಲ್‌ ಮಾಡಿದ ಎಲ್ಲಾ ಬೌಲರ್‌ಗಳು ವಿಕೆಟ್‌ ಪಡೆದರು. ಅದರಲ್ಲಿಯೂ ವಿಶೇಷವಾಗಿ ರಶೀದ್‌ ಖಾನ್‌ ಹಾಗೂ ಪ್ರಸಿಧ್‌ ಕೃಷ್ಣ ಪ್ರಮುಖ ಎರಡೆರಡು ವಿಕೆಟ್‌ಗಳನ್ನು ಪಡೆದರು. ಇನ್ನುಳಿದವರು ತಲಾ ಒಂದೊಂದು ವಿಕೆಟ್‌ ಪಡೆದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »