Karunadu Studio

ಕರ್ನಾಟಕ

‌Viral Video: ಇದೇನು ಮದುವೆ ಮನೆಯೋ…ರಣರಂಗವೋ..? ಶಾಕಿಂಗ್‌ ವಿಡಿಯೊ ವೈರಲ್! – Kannada News | Viral Video Brawl Erupts After Fight Between Bride And Groom’s Sides Over Disruption At Wedding


ಲಖನೌ: ಮದುವೆಮನೆಯಲ್ಲಿ ಜಗಳ, ಗಲಾಟೆಗಳು ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಇಂತಹದೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಗಳದ ಹಿಂದಿನ ಕಾರಣವೆಂದರೆ ಒಂದು ಕಡೆಯವರು ಮದುವೆಯಲ್ಲಿ ಗೊಂದಲವನ್ನು ಸೃಷ್ಟಿಸಿದ್ದಂತೆ. ಇದರಿಂದ ಕೋಪಗೊಂಡು ಇನ್ನೊಂದು ಕಡೆಯವರು ಅವರಿಗೆ ಹೊಡೆದಿದ್ದಾರೆ. ಅವರು ಮದುವೆಯ ಮನೆಯಲ್ಲಿ ಪರಸ್ಪರ ಹೊಡೆದಾಡಿಕೊಂಡ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ವೈರಲ್ ಆದ ವಿಡಿಯೊದಲ್ಲಿ, ಮದುವೆ ಮೆರವಣಿಗೆಯಲ್ಲಿ ಬಂದ ಸದಸ್ಯರು ಮದುವೆಯ ಅಲಂಕಾರವನ್ನು ಹಾಳುಮಾಡುವುದು ಸೆರೆಯಾಗಿದೆ.

ಕೆಲವರು ಹೊಡೆದಾಡುತ್ತಾ ನೆಲದ ಮೇಲೆ ಬಿದ್ದಿದ್ದಾರೆ. ಇತ್ತ ಕಡೆ ಹೊಡೆದಾಟದಲ್ಲಿ ತೊಡಗಿರುವ ತಮ್ಮ ಗಂಡಂದಿರನ್ನು ತಡೆಯಲು ಮಹಿಳೆಯರು ಪ್ರಯತ್ನಿಸಿದ್ದಾರೆ. ಈ ಜಗಳದ ಸಮಯದಲ್ಲಿ ವರನ ಕಡೆಯ ಅನೇಕ ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಕೊನೆಗೆ ಪೊಲೀಸರು ಸ್ಥಳಕ್ಕೆ ಬಂದು ಎರಡೂ ಕಡೆಯವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯದಿದ್ದಾರೆ. ಮತ್ತು ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ವಿಡಿಯೊ ಇಲ್ಲಿದೆ ನೋಡಿ…



ಇದೇ ರೀತಿಯ ಘಟನೆ ಉತ್ತರ ಪ್ರದೇಶದ ಜಲೌನ್‌ನಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ, ಒರೈ ಕೊಟ್ವಾಲಿಯ ಅಮನ್ ರಾಯಲ್ ಗಾರ್ಡನ್‍ನಲ್ಲಿ ವರನ ಕುಟುಂಬ ಮತ್ತು ಡೆಕೋರೆಷನ್ ಮಾಡುವವರ ನಡುವೆ ವಾಗ್ವಾದ ನಡೆದ ನಂತರ ಮದುವೆ ಮನೆ ಯುದ್ಧಭೂಮಿಯಾಗಿ ಮಾರ್ಪಟ್ಟಿತು. ಸಣ್ಣ ಭಿನ್ನಾಭಿಪ್ರಾಯದ ಬಗ್ಗೆ ಶುರುವಾದ ಜಗಳವು ಶೀಘ್ರದಲ್ಲೇ ಹೊಡೆದಾಟಕ್ಕೆ ಕಾರಣವಾಗಿತ್ತು. ಒದೆಯುವುದು ಮತ್ತು ಪೀಠೋಪಕರಣಗಳನ್ನು ಒಬ್ಬರ ಮೇಲೆ ಮತ್ತೊಬ್ಬರು ಎಸೆಯುವ ಮೂಲಕ ಜಗಳವಾಡಿದ್ದರು. ಘಟನೆಯ ಸಂಪೂರ್ಣ ದೃಶ್ಯ ಸ್ಥಳದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಈ ಸುದ್ದಿಯನ್ನೂ ಓದಿ:Viral Video: ಪತಿಯ ತೊಡೆಯ ಮೇಲೆ ಮಲಗಿದ ಮಹಿಳೆಗೆ ಬಿತ್ತು ಭಾರೀ ದಂಡ; ಏನಿದು ವೈರಲ್‌ ವಿಡಿಯೊ?

ಇತ್ತೀಚೆಗಷ್ಟೇ ಮದುವೆಯ ದಿನದಂದು ವರರಿಬ್ಬರು ವರದಕ್ಷಿಣೆಯಾಗಿ ಕಾರು ಕೇಳಿದ್ದಕ್ಕೆ ಕೋಪಗೊಂಡ ಇಬ್ಬರು ಸಹೋದರಿಯರು ಮದುವೆಯನ್ನು ಕ್ಯಾನ್ಸಲ್‌ ಮಾಡಿದ ಅಘಾತಕಾರಿ ಘಟನೆ ನಡೆದಿತ್ತು. ಮದುವೆಯ ಆಚರಣೆಗಳ ಮಧ್ಯದಲ್ಲಿ ವರರಿಬ್ಬರು ಹಾಗೂ ಅವರ ಕುಟುಂಬ ಸದಸ್ಯರ ಜೊತೆ ಸೇರಿ ವರದಕ್ಷಿಣೆಗಾಗಿ ಕಾರನ್ನು ಬೇಡಿಕೆ ಇಟ್ಟಿದ್ದರಿಂದ ಈ ಮದುವೆ ಬೇಡ ಎಂದು ವಧುಗಳಿಬ್ಬರು ಹೇಳಿದ್ದಾರೆ. ಇದರಿಂದ ಎರಡೂ ಕಡೆಗಳ ನಡುವೆ ಜಗಳ ಭುಗಿಲೆದ್ದಿತು ಎನ್ನಲಾಗಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.





Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »