Karunadu Studio

ಕರ್ನಾಟಕ

Ricky Rai Shoot Out: ರಿಕ್ಕಿ ರೈ ಮೇಲೆ ಗುಂಡು; ಮುತ್ತಪ್ಪ ರೈ ಮಾಜಿ ಗನ್‌ಮ್ಯಾನ್‌ ಮೇಲೆ ಹೆಚ್ಚಿದ ಅನುಮಾನ – Kannada News | muthappa rai son ricky rai shoot out doubts raised on gunman


ರಾಮನಗರ: ಮಾಜಿ ಡಾನ್‌ ಮುತ್ತಪ್ಪ ರೈ (Muthappa rai) ಪುತ್ರ ರಿಕ್ಕಿ ರೈ ಮೇಲೆ ಶೂಟೌಟ್ (Riacky Rai shoot out) ಆದ ಪ್ರಕರಣ ನಡೆದು 6 ದಿನಗಳು ಕಳೆದರೂ ಪೊಲೀಸರ ತನಿಖೆ ತಾರ್ಕಿಕ ಅಂತ್ಯ ತಲುಪಿಲ್ಲ. ಸದ್ಯ ಮುತ್ತಪ್ಪ ರೈ ಮಾಜಿ ಗನ್‌ಮ್ಯಾನ್ (Gunman) ವಿಠಲ್ ಮೇಲೆ ಅನುಮಾನ ಬಲವಾಗಿದೆ. ಸದ್ಯ ಆಸ್ಪತ್ರೆಯಲ್ಲಿರುವ ವಿಠಲ್ ಅಲ್ಲಿಂದ ಹೊರ ಬರುತ್ತಿದ್ದಂತೆ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಹಲವು ಕಾರಣಗಳಿಂದಾಗಿ ಪೊಲೀಸರಿಗೆ ಆತನ ಮೇಲೆ ಅನುಮಾನ ಹೆಚ್ಚಿದೆ. ಗನ್‌ಮ್ಯಾನ್‌ ಸ್ವತಃ ಇದನ್ನು ಮಾಡಿದನೇ ಅಥವಾ ರಿಕ್ಕಿ ರೈಯೇ ಇದನ್ನು ಮಾಡಿಸಿ ಫೈರಿಂಗ್‌ನ ನಾಟಕವಾಡಿದನೇ ಎನ್ನುವ ಅನುಮಾನ ಕೂಡ ಪೊಲೀಸರಿಗೆ ಮೂಡಿದೆ.

ಈಗಾಗಲೇ ವಿಠಲ್‌ನನ್ನು ಪೊಲೀಸರು ಒಂದು ಸುತ್ತು ವಿಚಾರಣೆ ನಡೆಸಿದ್ದು, ಈ ಸಂದರ್ಭದಲ್ಲಿ ಆತನಿಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಆತನನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗುರುವಾರ ಆತ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದು, ಬಳಿಕ ವಿಚಾರಣೆ ನಡೆಸಲಿದ್ದಾರೆ. ಪೊಲೀಸರಿಗೆ ಶೂಟೌಟ್ ನಡೆದ ಸ್ಥಳದಲ್ಲಿ ಸಿಕ್ಕಿರುವ ಬುಲೆಟ್, ವಿಠಲ್ ಬಳಿ ಇದ್ದ ಗನ್‌ನ ಬುಲೆಟ್ ಎಂದು ಪೊಲೀಸರು ಶಂಕಿಸಿದ್ದಾರೆ. ಈತನ ಗನ್ ಅನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಸ್ಪಷ್ಟ ತೀರ್ಮಾನ ನೀಡುವಂತೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಗನ್ ಅನ್ನು ಕಳುಹಿಸಿದ್ದು, ತಜ್ಞ ವರದಿಗಾಗಿ ಕಾಯುತ್ತಿದ್ದಾರೆ.

ಮುತ್ತಪ್ಪ ರೈ ಬಳಿ ಗನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಈತ ಕೆಲಕಾಲ ರಿಕ್ಕಿ ರೈಗೂ ಗನ್‌ಮ್ಯಾನ್ ಆಗಿದ್ದ. ಆರೋಗ್ಯ ಸರಿ ಇಲ್ಲದ ಕಾರಣ ಗನ್ ಮ್ಯಾನ್ ಕೆಲಸ ಬಿಟ್ಟು ಮನೆಯಲ್ಲೇ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ. ಮುತ್ತಪ್ಪ ರೈ ಸಾಯುವ ಮುನ್ನ ಈತನಿಗೆ ನಿವೇಶನ ನೀಡುವುದಾಗಿ ಹೇಳಿದ್ದರು. ಆದರೆ, ರಿಕ್ಕಿ ರೈ ಸೈಟ್ ಕೊಡಲು ನಿರಾಕರಿಸಿದ್ದ ಎಂದು ತಿಳಿದು ಬಂದಿದೆ. ಈ ಕಾರಣಕ್ಕೆ ವಿಠಲ್ ಕೋಪಗೊಂಡಿರಬಹುದು ಎಂಬ ಸಂದೇಹ ಮೂಡಿದೆ.

ರಿಕ್ಕಿ ರೈ ಮೇಲೆ ಶೂಟೌಟ್ ನಡೆದಿದ್ದ ಏ.19ರಂದು ವಿಠಲ್ ಬಿಡದಿಯ ರಿಕ್ಕಿ ರೈ ನಿವಾಸದಿಂದ ಹಿಂಬಾಗಿಲಿನಿಂದ ಹೊರಗೆ ಬಂದು ಮತ್ತೆ ಅದೇ ಬಾಗಿಲಿನಿಂದ ಒಳಗೆ ಹೋಗಿರುವ ಸಿಸಿ ಕ್ಯಾಮೆರಾ ದೃಶ್ಯಾವಳಿ ಸೆರೆಯಾಗಿದ್ದು, ಇದು ಸಹ ಪೊಲೀಸರ ಅನುಮಾನ ಹೆಚ್ಚಳಕ್ಕೆ ಕಾರಣವಾಗಿದೆ.

ಪೊಲೀಸರ ಹೇಳಿಕೆ

ರಿಕ್ಕಿ ರೈ ಮೇಲಿನ ಶೂಟೌಟ್ ಪ್ರಕ ರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ದೂರುದಾರರು ಸಂದೇಹ ವ್ಯಕ್ತಪಡಿಸಿರುವ 3ನೇಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ಇದರೊಂದಿಗೆ ಎಫ್‌ಐಆರ್‌ನಲ್ಲಿ ಇಲ್ಲದವರ ಹೇಳಿಕೆಯನ್ನೂ ಪಡೆಯಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ ತಿಳಿಸಿದರು.

ಕೆಲವು ವರದಿಗಳು ಬರಬೇಕಿದ್ದು, ಈ ವರದಿಗಳು ಬಂದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಸಂಶಯಾಸ್ಪದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಹೆಚ್ಚಿನ ತನಿಖೆಗೆ ಒಳಪಡಿಸಲು ಸಾಧ್ಯವಾಗಿಲ್ಲ. ಸದ್ಯಕ್ಕೆ ಸಂಶಯಾಸ್ಪದ ವ್ಯಕ್ತಿ ಮತ್ತು ರಿಕ್ಕಿ ರೈ ಇಬ್ಬರೂ ಆಸ್ಪತ್ರೆಯಲ್ಲಿದ್ದಾರೆ. ಇದು ಫೈರಿಂಗ್ ಪ್ರಕರಣವಾಗಿರುವ ಕಾರಣ ಹಲವು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಎಲ್ಲರ ವಿಚಾರಣೆ ಮುಗಿದ ಬಳಿಕ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣದ ಮೂರನೇ ಆರೋಪಿ ನಿತೀಶ್ ಶೆಟ್ಟಿ ಬುಧವಾರ ತಮ್ಮ ವಕೀಲರ ಜೊತೆ ಬಿಡದಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದರು. ಬಿಡದಿ ಠಾಣೆಯಲ್ಲಿ ನಿತೀಶ್ ಶೆಟ್ಟಿಯನ್ನು ಎಎಸ್ಪಿ ಸುರೇಶ್ ವಿಚಾರಣೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿವರಣೆ ಪಡೆದರು.

ಇದನ್ನೂ ಓದಿ: Ricky Rai Shoot out: ಮುತ್ತಪ್ಪ ರೈ ಮಗನ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಟ್ವಿಸ್ಟ್‌, ಗನ್‌ ಮ್ಯಾನ್‌ ವಶಕ್ಕೆ! ಗುಂಡಿನ ದಾಳಿಯ ನಾಟಕವಾಡಿದನಾ ರಿಕ್ಕಿ?



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »