Karunadu Studio

ಕರ್ನಾಟಕ

LIC: ಪಹಲ್ಗಾಮ್‌ ದಾಳಿ: ಮೃತರ ಕುಟುಂಬಸ್ಥರ ನೆರವಿಗೆ ಎಲ್‌ಐಸಿ – Kannada News | Pahalgam attack: LIC to help families of deceased


ಬೆಂಗಳೂರು: ಪಹಲ್ಗಾಮ್ ಭೀಕರ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗಾಗಿ ಲೈಫ್ ಇನ್ಸೂರೆನ್ಸ್ ಪಾಲಿಸಿ ವಿನಾಯಿತಿ ಪ್ರಕಟಿಸಿದೆ. ಪಹಲ್ಗಾಮ್ ಘಟನೆಯಿಂದ ತೀವ್ರ ದುಃಖವಾಗಿದೆ. ಬಾಧಿತರನ್ನು ಬೆಂಬಲಿಸಲು ಹಾಗೂ ಆರ್ಥಿಕ ಸಹಾಯ ಒದಗಿಸಲು ಎಲ್‌ಐಸಿ ಬದ್ಧವಾಗಿದೆ. ಕ್ರೈಮ್ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ಕಾರ್ಯ ನಿರ್ವಹಿಸಲಾಗು ವುದು ಎಂದು ಕಂಪನಿ ಹೇಳಿದೆ. ಮರಣ ಪ್ರಮಾಣಪತ್ರದ ಬದಲಾಗಿ, ಸರ್ಕಾರಿ ದಾಖಲೆಗಳಲ್ಲಿ ಇರುವ ಯಾವುದೇ ಸಾಕ್ಷಿ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ನೀಡಲಾದ ಪರಿಹಾರದ ಡಾಕ್ಯು ಮೆಂಟ್ಸ್‌ನ್ನು ಕೂಡ ಪುರಾವೆಯಾಗಿ ಎಲ್‌ಐಸಿ ಪರಿಗಣಿಸಲಿದೆ ಎಂದು ಸಿಇಒ ಸಿದ್ದಾರ್ಥ್ ಮೋಹಂತಿ ಹೇಳಿದ್ದಾರೆ. ಪರಿಹಾರ ಧನ ಹಕ್ಕುದಾರರಿಗೆ ತಲುಪಿದೆಯೋ ಇಲ್ಲವೋ ಎನ್ನುವ ಬಗ್ಗೆಯೂ ಗಮನ ಹರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; Grater Bangalore: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌

ಹೆಚ್ಚಿನ ಸಹಾಯಕ್ಕಾಗಿ ಹಕ್ಕುದಾರರು ಹತ್ತಿರದ ಎಲ್‌ಐಸಿ ಶಾಖೆಗೆ ತೆರಳಬಹುದು. ಕಾಲ್‌ ಸೆಂಟರ್‌ – 022 68276827 ಗೆ ಕರೆ ಮಾಡಬಹುದು ಹಾಗೇ ಇ-ಮೇಲ್ – ed_cc@licindia.com www.licindia.in ಕೂಡ ಮಾಡಬಹುದಾಗಿದೆ



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »