Karunadu Studio

ಕರ್ನಾಟಕ

CSK vs SRH: ಸಿಕ್ಸರ್‌ ಬಾರಿಸದೆ ದಾಖಲೆ ಬರೆದ ಚೆನ್ನೈ-ಹೈದರಾಬಾದ್‌ ಪಂದ್ಯ – Kannada News | CSK vs SRH: First match without a six in the power play


ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌(CSK vs SRH) ತಂಡಗಳ ನಡುವೆ ಶುಕ್ರವಾರ ನಡೆದ ಐಪಿಎಲ್‌(IPL 2025) ಪಂದ್ಯ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದೆ. ಪವರ್‌ ಪ್ಲೇಯಲ್ಲಿ ಉಭಯ ತಂಡಗಳಿಂದ ಕನಿಷ್ಠ ಒಂದೂ ಸಿಕ್ಸರ್‌ ಬಾರಿಸಲು ಸಾಧ್ಯವಾಗಿಲ್ಲ. ಇದು ಹಾಲಿ ಆವೃತ್ತಿಯ ಐಪಿಎಲ್‌ನಲ್ಲಿ ಎರಡೂ ತಂಡಗಳು ಪವರ್‌ ಪ್ಲೇಯಲ್ಲಿ ಸಿಕ್ಸರ್‌ ಬಾರಿಸದ ಮೊದಲ ಪಂದ್ಯ ಎನಿಸಿತು. ಸೋಲು ಕಂಡ ಚೆನ್ನೈ ‌ಚೆಪಾಕ್‌ ಮೈದಾನದಲ್ಲಿ( MA Chidambaram Stadium) ಇದೇ ಮೊದಲ ಬಾರಿಗೆ ಆವೃತ್ತಿಯೊಂದರಲ್ಲಿ ಸತತ 4 ಕಂಡ ಅವಮಾನ ಎದುರಿಸಿತು.

ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಡಿವಾಲ್ಡ್​ ಬ್ರೆವಿಸ್​ 42 ರನ್​ (25 ಎಸೆತ, 1 ಬೌಂಡರಿ, 4 ಸಿಕ್ಸರ್​) ದಿಟ್ಟ ಆಟದ ನೆರವಿನಿಂದ 19.5 ಓವರ್​ಗಳಲ್ಲಿ 154 ರನ್​ ಗಳಿಸಿತು. ಪ್ರತಿಯಾಗಿ ಬ್ಯಾಟ್‌ ಮಾಡಿದ ಸನ್​ರೈಸರ್ಸ್​ ಇಶಾನ್​ ಕಿಶನ್​ (44 ರನ್​, 34 ಎಸೆತ, 5 ಬೌಂಡರಿ, 1 ಸಿಕ್ಸರ್​) ಮತ್ತು ಹೋರಾಟದಿಂದ 18.4 ಓವರ್​ಗಳಲ್ಲಿ 5 ವಿಕೆಟ್​ಗೆ 155 ರನ್​ ಗಳಿಸಿ ಗೆಲುವು ಸಾಧಿಸಿತು. ಹೈದರಾಬಾದ್‌ ಪರ ಘಾತಕ ಬೌಲಿಂಗ್‌ ದಾಳಿ ನಡೆಸಿದ ಹರ್ಷಲ್​ ಪಟೇಲ್​ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

43 ವರ್ಷದ ಧೋನಿ ಅವರು ಈ ಪಂದ್ಯದಲ್ಲಿ ಮೈದಾನಕ್ಕಿಳಿಯುತ್ತಿದ್ದಂತೆ 400 ಟಿ20 ಪಂದ್ಯಗಳನ್ನು ಪೂರ್ತಿಗೊಳಿಸಿ, ಈ ಸಾಧನೆಗೈದ ನಾಲ್ಕನೇ ಭಾರತೀಯ ಕ್ರಿಕೆಟಿಗ ಎನಿಸಿಕೊಂಡರು. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ 456 ಪಂದ್ಯಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ. ದಿನೇಶ್ ಕಾರ್ತಿಕ್(412) ಮತ್ತು ವಿರಾಟ್ ಕೊಹ್ಲಿ(407) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ IPL 2025: 14ರ ಪೋರ ವೈಭವ್‌ ಸೂರ್ಯವಂಶಿ ಭಯಮುಕ್ತ ಬ್ಯಾಟಿಂಗ್‌ಗೆ ಸುರೇಶ್‌ ರೈನಾ ಫಿದಾ!

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ತಂಡಕ್ಕೆ ಪ್ಲೇ ಆಫ್ ಕನಸು ಜೀವಂತವಿರಿಸಲು ಮುಂದಿನ ತನ್ನ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ. ಅಲ್ಲದೆ ಇತರ ತಂಡಗಳ ಫಲಿತಾಂಶದ ಮೇಲೂ ಅವಲಂಬಿತವಾಗಿರಲಿದೆ. ಒಂದು ಪಂದ್ಯ ಸೋತರೂ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ. ಆ ಬಳಿಕ ಉಳಿದ ಪಂದ್ಯಗಳನ್ನು ಕೇವಲ ಔಪಚಾರಿಕವಾಗಿ ಆಡಬೇಕು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »