Karunadu Studio

ಕರ್ನಾಟಕ

Elephant attack: ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಸಾವು; ಶಾಸಕ ಸಿಮೆಂಟ್‌ ಮಂಜು ಸಂತಾಪ – Kannada News | Coffee plantation owner killed in wild elephant attack


ವಿಶ್ವವಾಣಿ ಸುದ್ದಿಮನೆ, ಸಕಲೇಶಪುರ: ಕಾಫಿ ತೋಟದಲ್ಲಿ ಕಾಡಾನೆ ದಾಳಿಯಿಂದ ಮಾಲೀಕ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಬೈಕೆರೆವ ಗ್ರಾಮದಲ್ಲಿ ನಡೆದಿದೆ.
ಬೈಕೆರೆವ ಗ್ರಾಮದ ಷಣ್ಮುಖ(45) ಮೃತಪಟ್ಟವರು. ಅಮೃತೇಶ್ವರ ಕಾಫಿ ತೋಟದ ಮಾಲಿಕರಾಗಿದ್ದ ಇವರು ತೋಟದಲ್ಲಿ ಕೆಲಸ ಮಾಡಿಸಲು ತೆರಳಿದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಷಣ್ಮುಖರಿಗೆ 15 ಎಕರೆ ಕಾಫಿ ಕಾಫಿ ತೋಟವಿದೆ. ಇವರ ತೋಟದಲ್ಲಿ ರಾತ್ರಿಯಿಂದಲೇ ಆನೆಗಳ ಹಿಂಡು ಬೀಡು ಬಿಟ್ಟಿದ್ದು, ಈ ಬಗ್ಗೆೆ ಷಣ್ಮುಖರಿಗೆ ಮಾಹಿತಿ ಇತ್ತೆೆನ್ನಲಾಗಿದೆ. ಹೀಗಿದ್ದರೂ ಅವರು ಏಕೆ ತೋಟಕ್ಕೆೆ ಹೋದರು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇನ್ನು ಮೃತಪಟ್ಟಿರುವ ಷಣ್ಮುಖ ಅವರ ಸಾವಿಗೆ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರು ಸಂತಾಪ ವ್ಯಕ್ತಪಡಿಸಿದ್ದು, ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಈ ಹಿಂದೆ ಕಾಡಾನೆ ದಾಳಿಗೆ 15 ಲಕ್ಷ ಪರಿಹಾರ ನೀಡಲಾಗುತ್ತಿತ್ತು. ಆದರೆ ರಾಜ್ಯ ಸರಕಾರ ಪರಿಹಾರವನ್ನು 25 ಲಕ್ಷಕ್ಕೆೆ ಏರಿಸಿದೆ. ಈ ಪ್ರಕರಣದಲ್ಲಿ 15 ಲಕ್ಷ ಪರಿಹಾರ ನೀಡಲು ಅರಣ್ಯ ಇಲಾಖೆ ಮುಂದಾಗಿತ್ತು. ಆದರೆ ಶಾಸಕರ ಆಗ್ರಹಕ್ಕೆೆ ಮಣಿದು 20 ಲಕ್ಷ ರುಪಾಯಿ ಚೆಕ್ ವಿತರಿಸಲು ಇಲಾಖೆ ತೀರ್ಮಾನಿಸಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »