Karunadu Studio

ಕರ್ನಾಟಕ

Sweden Shooting: ಸ್ವೀಡನ್‌ನಲ್ಲಿ ಭೀಕರ ಶೂಟ್‌ಔಟ್‌; 3 ಮಂದಿ ಬಲಿ? – Kannada News | Sweden shooting: mass firing incident at hair salon


ಸ್ಟಾಕ್‌ಹೋಮ್‌: ಸ್ವೀಡನ್‌ ರಾಜಧಾನಿ ಸ್ಟಾಕ್‌ಹೋಮ್‌ನ 60 ಕಿ.ಮೀ. ದೂರದಲ್ಲಿರುವ ಉಪ್ಸಲಾದಲ್ಲಿ ಮಂಗಳವಾರ (ಏ. 29) ಗುಂಡಿನ ದಾಳಿ ನಡೆದಿದ್ದು, ಮೂವರು ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ (Mass Firing). ಸ್ಥಳೀಯ ಮಾಧ್ಯಮಗಳು ಮತ್ತು ಸ್ವೀಡಿಷ್ ಪೊಲೀಸರ ಪ್ರಕಾರ, ಈ ದಾಳಿಯು ಪಟ್ಟಣದ ಮಧ್ಯ ಭಾಗದಲ್ಲಿ ನಡೆದಿದೆ (Sweden Shooting). ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ವರದಿಯೊಂದು ವಿವರಿಸಿದೆ.

ʼʼಉಪ್ಸಾಲಾದಲ್ಲಿ ದ್ವಿಚಕ್ರದಲ್ಲಿ ಬಂದ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ ಬಗ್ಗೆ ಪೊಲೀಸರಿಗೆ ದೂರು ಬಂದ ಹಿನ್ನೆಲೆಯಲ್ಲಿ ಅವರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆʼʼ ಎಂದು ಮೂಲಗಳು ತಿಳಿಸಿವೆ. ಈ ಘಟನೆಯಿಂದ ದೇಶಾದ್ಯಂತ ಭಯದ ವಾತಾವರಣ ಮೂಡಿದ್ದು, ತನಿಖೆ ನಡೆಯುತ್ತಿದೆ. ಸ್ವೀಡಿಷ್ ಪಬ್ಲಿಕ್ ಟೆಲಿವಿಷನ್ (SVT) ಗುಂಡಿನ ದಾಳಿಯನ್ನು ದೃಢಪಡಿಸಿದ್ದು, ಶಂಕಿತ ಬಂದೂಕುಧಾರಿ ಸ್ಕೂಟರ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಿದೆ.



ಈ ಸುದ್ದಿಯನ್ನೂ ಓದಿ: Mysore Family Killed: ಅಮೆರಿಕದಲ್ಲಿ ಪತ್ನಿ ಪುತ್ರನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮೈಸೂರು ಉದ್ಯಮಿ

ಕೆಲವು ದಿನಗಳ ಹಿಂದೆಯಷ್ಟೇ ಸ್ವೀಡನ್‌ನಲ್ಲಿ ಗುಂಡಿನ ದಾಳಿ ನಡೆದಿತ್ತು. ಫೆಬ್ರವರಿಯಲ್ಲಿ ಸ್ವೀಡನ್‌ನ ಒರೆಬ್ರೊದಲ್ಲಿರುವ ಶಾಲಾ ಕ್ಯಾಂಪಸ್‌ನಲ್ಲಿ ಗುಂಡಿನ ದಾಳಿ ನಡೆದು ಸುಮಾರು 10 ಜನರು ಸಾವನ್ನಪ್ಪಿದ್ದರು. ಈ ಘಟನೆ ಮರೆಯಾಗುವ ಮುನ್ನ ಅಂತಹದ್ದೇ ಮತ್ತೊಂಡು ಘಟನೆ ನಡೆದಿದೆ.

ಈ ಘಟನೆಯನ್ನು ಸ್ವೀಡನ್‌ನ ಇತಿಹಾಸದಲ್ಲಿಯೇ ಅತ್ಯಂತ ಭೀಕರ ಗುಂಡಿನ ದಾಳಿ ಎಂದು ಪ್ರಧಾನಿ ಉಲ್ಫ್ ಕ್ರಿಸ್ಟರ್‌ಸನ್ ಬಣ್ಣಿಸಿದ್ದರು. ಈ ದಾಳಿಯು ಸ್ಟಾಕ್‌ಹೋಮ್‌ನ 200 ಕಿ.ಮೀ. ದೂರದಲ್ಲಿರುವ ರಿಸ್‌ಬರ್ಗ್ಸ್‌ಕಾ ಶಾಲೆಯಲ್ಲಿ ನಡೆದಿತ್ತು. ದಾಳಿಕೋರ ಒಬ್ಬಂಟಿಯಾಗಿಯೇ ಕೃತ್ಯ ಎಸಗಿದ್ದಾನೆ ಎಂದು ಆ ಬಳಿಕ ಪೊಲೀಸರು ತಿಳಿಸಿದ್ದರು. ಘಟನೆಯಲ್ಲಿ ಅವನೂ ಹತನಾಗಿದ್ದ.





Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »