Karunadu Studio

ಕರ್ನಾಟಕ

Pralhad Joshi: ಬೆಂಗಳೂರು-ಬೆಳಗಾವಿ ಮಧ್ಯೆ ʼವಂದೇ ಭಾರತ್ʼ ರೈಲು; ಪ್ರಲ್ಹಾದ್‌ ಜೋಶಿ ಮನವಿಗೆ ಕೇಂದ್ರದಿಂದ ಸ್ಪಂದನೆ – Kannada News | Vande Bharat train between Bengaluru and Belagavi


ನವದೆಹಲಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರ ಒತ್ತಾಯದ ಮೇರೆಗೆ ರೈಲ್ವೆ ಇಲಾಖೆ ಅಂತೂ ಬೆಳಗಾವಿ-ಬೆಂಗಳೂರು ಮಧ್ಯೆ ʼವಂದೇ ಭಾರತ್ ರೈಲುʼ (Vande Bharat Train)‌ ಸಂಚಾರ ಆರಂಭಿಸಲು ಮುಂದಾಗಿದೆ. ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚಾರದಿಂದ ಉತ್ತರ ಕರ್ನಾಟಕದ ಸಂಪರ್ಕ ಮತ್ತು ಅಭಿವೃದ್ಧಿಗೆ ದೊಡ್ಡ ಉತ್ತೇಜನ ದೊರೆಯಲಿದೆ. ಹಾಗಾಗಿ ಈ ರೈಲು ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಪ್ರಲ್ಹಾದ್‌ ಜೋಶಿ ಅವರು ಫೆ. 10ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಏ. 28ರಂದು ಸಚಿವ ಜೋಶಿ ಅವರಿಗೆ ಪತ್ರ ಬರೆದು ತಮ್ಮ ಒತ್ತಾಸೆಯಂತೆ ಬೆಂಗಳೂರು-ಬೆಳಗಾವಿ ಗೆ ವಂದೇ ಭಾರತ್ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದಾಗಿ ತಿಳಿಸಿದ್ದಾರೆ.

ಈ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಚಿವ ಪ್ರಲ್ಹಾದ್‌ ಜೋಶಿ ಧನ್ಯವಾದ ಅರ್ಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | AFMS Recruitment 2025: ಆರ್ಮಿ ಆಸ್ಪತ್ರೆಯಲ್ಲಿದೆ 400 ಮೆಡಿಕಲ್‌ ಆಫೀಸರ್‌ ಹುದ್ದೆ; ಇಂದೇ ಅರ್ಜಿ ಸಲ್ಲಿಸಿ

ಪದ್ಮಶ್ರೀ ಪುರಸ್ಕೃತರಿಗೆ ಸನ್ಮಾನ

ನವದೆಹಲಿ: ಕನ್ನಡ ನಾಡಿನ ಮೂವರು ಪದ್ಮಶ್ರೀ ಪುರಸ್ಕೃತರನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿದರು. ಪದ್ಮಶ್ರೀ ಪುರಸ್ಕೃತರಾದ ಕನ್ನಡ ಚಿತ್ರರಂಗದ ಸಾಹಸ ನಿರ್ದೇಶಕರೆಂದೇ ಖ್ಯಾತಿ ಪಡೆದ ಡಾ.ಹಾಸನ ರಘು, ಗೊಂಬೆಯಾಟ ಕಲಾವಿದೆ, ಶತಾಯುಷಿ ಕೊಪ್ಪಳ ತಾಲೂಕಿನ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಹಾಗೂ ಕ್ಯಾನ್ಸರ್ ರೋಗಿಗಳ ಪಾಲಿಗೆ ʼವೈದ್ಯೋ ನಾರಾಯಣ ಹರಿʼ ಎನ್ನುವಂತೆ ಸೇವೆ ಸಲ್ಲಿಸುತ್ತಿರುವ ತಜ್ಞ ವೈದ್ಯ ಡಾ.ದೇಶಮಾನೆ ವಿಜಯಲಕ್ಷ್ಮಿ ಅವರನ್ನು ಸಚಿವ ಪ್ರಲ್ಹಾದ್ ಜೋಶಿ ಸನ್ಮಾನಿಸಿ, ಪದ್ಮಶ್ರೀ ಪುರಸ್ಕೃತರ ಸೇವಾ ಸಾಧನೆಗೆ ಅಭಿಮಾನ ವ್ಯಕ್ತಪಡಿಸಿದರು.

ಮೂವರೂ ಪದ್ಮಶ್ರೀ ಪುರಸ್ಕೃತರೊಂದಿಗೆ ಕುಶಲೋಪರಿ ಮಾತನಾಡುತ್ತ, ಅವರ ಸೇವೆ, ಪರಿಶ್ರಮ, ಸಾಧನೆ, ತ್ಯಾಗವನ್ನೆಲ್ಲಾ ಆಲಿಸಿದ ಸಚಿವರು ಹೆಮ್ಮೆ ವ್ಯಕ್ತಪಡಿಸುತ್ತ, ಇಂಥ ಮಹನೀಯರನ್ನು ಸನ್ಮಾನಿಸುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಎಂದು ಹೇಳಿದರು.

ಡಾ. ಹಾಸನ ರಘು: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಡಾ. ಹಾಸನ ರಘು ಅವರು, 1971ರ ಪಾಕಿಸ್ತಾನ ಯುದ್ಧದಲ್ಲಿ ಹೋರಾಡಿದವರು. ಇದಕ್ಕಾಗಿ ಭಾರತ ಸರ್ಕಾರದಿಂದ ಶ್ರೇಷ್ಠ ಪದಕ ಪಡೆದವರು. ಬಳಿಕ ಸೇನಾ ನಿವೃತ್ತರಾಗಿ, ಪುಟ್ಟಣ್ಣ ಕಣಗಾಲ್‌ ಅವರ ಮಾರ್ಗದರ್ಶನದಲ್ಲಿ ಕನ್ನಡ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರಸಿದ್ಧ ʼರಂಗನಾಯಕಿʼ ಚಿತ್ರದ ಮೂಲಕ ಕನ್ನಡ ಚಲನಚಿತ್ರಗಳಿಗೆ ಸಾಹಸ ನಿರ್ದೇಶಕರಾಗಿ ದುಡಿದಿದ್ದಾರೆ. ದೇಶದ ಸೇನಾ ಸೇವೆಯಿಂದ ಕನ್ನಡ ನಾಡಿನ ಕಲಾ ಸೇವೆಗೆ ಇಳಿದ ರಘು ಅವರು 150ಕ್ಕು ಹೆಚ್ಚು ಚಿತ್ರಗಳಲ್ಲಿ ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿದ ಕೀರ್ತಿಗೆ ಪಾತ್ರರು. ಇದೀಗ ಕರ್ನಾಟಕದ ಜಾನಪದ ಸಾಹಸ ಮತ್ತು ಸಮರ ಕಲೆಗಳ ಕಲಾವಿದರಾಗಿ, ಶಿಕ್ಷಕರಾಗಿ ಸಹ ಸೇವೆ ಮುಂದುವರಿದ್ದಾರೆ. ಇವರ ಸಾಹಸಗಾಥೆ ಕೇಳಿ ಸ್ವತಃ ಸಚಿವರೇ ಒಂದು ಸಲಾಂ ಹೇಳಿ ಗೌರವ ಸಲ್ಲಿಸಿದರು.

ಗೊಂಬೆಯಾಟದ ಭೀಮವ್ವ: ಕೊಪ್ಪಳ ತಾಲೂಕಿನವರಾದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರು ಇಡೀ ಜಗತ್ತಿಗೇ ತೊಗಲುಗೊಂಬೆಯಾಟ ಪರಿಚಯಿಸಿದ ಕಲಾವಿದೆ. ಗ್ರಾಮೀಣ, ಪುರಾತನ ಕಲೆಯನ್ನು ಪೋಷಿಸುವಲ್ಲಿ ಇವರ ಪಾತ್ರ ಅನನ್ಯ. ಶತಾಯುಷ್ಯದಲ್ಲೂ ಮುಂದಿನ ಪೀಳಿಗೆಗೆ ಈ ಕಲೆಯನ್ನು ರೂಢಿಸುತ್ತಿರುವ ಭೀಮಜ್ಜಿ ಸಹ ಸಾಹಸಿ ಕಲಾವಿದೆ. ಸಚಿವರು ಭೀಮಜ್ಜಿ ಪಕ್ಕದಲ್ಲೇ ಕುಳಿತು ಮಾತೃಸಲುಗೆಯಂತೆ ಅತ್ಯಾಪ್ತವಾಗಿ ಅವರ ಜೀವನಾನುಭವ, ಜೀವನಪಾಠ, ಕಲಾಸೇವೆಯ ಪರಿಯನ್ನು ಕೇಳಿ ಪಡೆದರು.

ಕ್ಯಾನ್ಸರ್ ತಜ್ಞೆ ಡಾ.ದೇಶಮಾನೆ ವಿಜಯಲಕ್ಷ್ಮಿ: ನಾಡಿನ ಕ್ಯಾನ್ಸರ್ ರೋಗಿಗಳ ಪಾಲಿಗೆ ಅಕ್ಷರಶಃ ’ವೈದ್ಯೋ ನಾರಾಯಣ ಹರಿಃ’ಯೇ ಆಗಿದ್ದಾರೆ ಇವರು. ತಮ್ಮಿಡೀ ಜೀವನವನ್ನು ಕ್ಯಾನ್ಸರ್ ರೋಗಿಗಳ ಸೇವೆಗೆ ಮುಡಿಪಾಗಿಟ್ಟವರು. ಮಾತೃದೇವೋಭವ ಎನ್ನುವ ನಮ್ಮ ಸಮಾಜದಲ್ಲಿ ಅಷ್ಟೇ ತ್ಯಾಗ, ಕಾಳಜಿ, ನಿಷ್ಠೆ ಮತ್ತು ಸಾಮಾಜಿಕ ಕಳಕಳಿಯಿಂದ ವೈದ್ಯಸೇವೆಯಲ್ಲಿ ನಿರತರಾದವರು. ಕ್ಯಾನ್ಸರ್ ರೋಗಿಗಳ ಪಾಲಿಗೆ ಇವರು ಸಂಜೀವಿನಿ, ಪುನರ್ಜನನಿ ಎನ್ನುವಂತೆ ಸಲ್ಲಿಸುತ್ತಿರುವ ಡಾ.ದೇಶಮಾನೆ ವಿಜಯಲಕ್ಷ್ಮಿ ಅವರ ಸೇವೆಯನ್ನು ಕೇಳಿ ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.

ನಾಡಿನಾದ್ಯಂತ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ನಿಸ್ವಾರ್ಥ ಸೇವೆಗೈಯುತ್ತಿರುವ ನಿಜ ಸಾಧಕರನ್ನು ಗುರುತಿಸಿ ‘ಪದ್ಮಶ್ರೀ’, ಉನ್ನತ ಪ್ರಶಸ್ತಿ – ಪುರಸ್ಕಾರ ನೀಡಿ ಗೌರವಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಾಧಕರಿಗೆ, ನಿಸ್ವಾರ್ಥ ಸೇವಕರಿಗೆ ಉತ್ಸಾಹ, ಪ್ರೇರಣೆ ನೀಡುತ್ತಿದ್ದಾರೆ ಎಂದು ಪ್ರಶಸ್ತಿ ಪುರಸ್ಕೃತರು ಇದೇ ವೇಳೆ ಸಂತಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನೂ ಓದಿ | Karnataka Weather: ರಾಜ್ಯಾದ್ಯಂತ ಮುಂದಿನ 5 ದಿನ ಅಬ್ಬರಿಸಲಿದೆ ಗುಡುಗು ಸಹಿತ ಮಳೆ



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »