Karunadu Studio

ಕರ್ನಾಟಕ

Kannadigaru UK: ಯುಕೆ ಕನ್ನಡಿಗರಿಂದ ಯುಗಾದಿ, ಅಂತಾರಾಷ್ಟ್ರೀಯ ನೃತ್ಯ ದಿನಾಚರಣೆ – Kannada News | Kannadigaru UK: Ugadi, International Dance Day celebrated by Kannadigas in UK


ಫೆಲ್ಥಂ: ಕನ್ನಡಿಗರು ಯುಕೆ (Kannadigaru UK) ವತಿಯಿಂದ ಏಪ್ರಿಲ್ 27ರಂದು ಅದ್ದೂರಿಯಾಗಿ ಯುಗಾದಿ (yugadi) ಹಬ್ಬ ಹಾಗೂ ಅಂತಾರಾಷ್ಟ್ರೀಯ ನೃತ್ಯ ದಿನವನ್ನು (International dance day) ಆಚರಿಸಲಾಯಿತು. ಈ ಸಂಭ್ರಮದಲ್ಲಿ 100ಕ್ಕೂ ಹೆಚ್ಚು ಕರ್ನಾಟಕ ಮೂಲದ ಸದಸ್ಯರು ಭಾಗವಹಿಸಿ ತಮ್ಮ ಭಾಷೆ, ಸಂಸ್ಕೃತಿಯೊಂದಿಗಿನ ಸಂಬಂಧವನ್ನು ಬಲಪಡಿಸಿಕೊಂಡರು. ಕಾರ್ಯಕ್ರಮದ ಆರಂಭಕ್ಕೂ ಮುನ್ನ ಭಾರತದ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಸ್ಮರಣಾರ್ಥ ಒಂದು ನಿಮಿಷ ಮೌನಾಚರಣೆ ನಡೆಸಲಾಯಿತು.

ಯುಗಾದಿ ಹಬ್ಬದ ಪ್ರಯುಕ್ತ ಕನ್ನಡಿಗರುಯುಕೆ ಹಮ್ಮಿಕೊಂಡಿದ್ದ ಪಾರಂಪರಿಕ ಬಾಳೆ ಎಲೆ ಊಟ ಎಲ್ಲರ ಮನ ಸೆಳೆಯಿತು. ಸಾಂಪ್ರದಾಯಿಕ ಶೈಲಿಯ ಊಟದ ಬಳಿಕ ಅಂತಾರಾಷ್ಟ್ರೀಯ ನೃತ್ಯ ದಿನಾಚರಣೆಯ ಅಂಗವಾಗಿ ಸಮುದಾಯದ ಸದಸ್ಯರು ವಿವಿಧ ನೃತ್ಯ ಪ್ರದರ್ಶನಗಳನ್ನು ನೀಡಿ ಎಲ್ಲರ ಮನಗೆದ್ದರು.

ಸಮಾಜಕ್ಕೆ ನೀಡಿರುವ ಅದ್ಭುತ ಕೊಡುಗೆಗಾಗಿ ಬೆಂಗಳೂರಿನಿಂದ ಆಗಮಿಸಿದ್ದ ರೇವತಿ ಕಾಮತ್ ಅವರನ್ನು ಕನ್ನಡಿಗರು ಯುಕೆ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯುಕೆ ಸರ್ಕಾರದ ಪಾರ್ಲಿಮೆಂಟರಿ ಅಂಡರ್ ಸೆಕ್ರಟರಿ ಆಫ್ ಸ್ಟೇಟ್ (ವಲಸೆ ಮತ್ತು ಪೌರತ್ವ) ಮತ್ತು ಸಮಾನತಾ ಸಚಿವೆಯಾದ ಸೀಮಾ ಮಲ್ಹೋತ್ರಾ ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ: Neha Kakkar: ಮೆಲ್ಬೋರ್ನ್‌ ಸಂಗೀತ ಕಛೇರಿ ವಿಳಂಬಕ್ಕೆ ಗಾಯಕಿ ನೇಹಾ ಕಕ್ಕರ್ ಕಾರಣ ಎಂದ ಆಯೋಜಕರು

ಪರಿಸರ ಸಂರಕ್ಷಣೆಗೆ ಗಣನೀಯ ಕೊಡುಗೆ ನೀಡುತ್ತಿರುವ ಜೆರೋಧಾ ಸಂಸ್ಥಾಪಕರಾದ ನಿತಿನ್ ಮತ್ತು ನಿಖಿಲ್ ಕಾಮತ್ ಅವರ ತಾಯಿ ರೇವತಿ ಕಾಮತ್ ಅವರ ಗಮನಾರ್ಹ ಸಾಧನೆಗಳಲ್ಲಿ ಸರೋವರ ಪುನರುಜ್ಜೀವನ ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಮರಗಳನ್ನು ನೆಟ್ಟಿರುವುದು ಕೂಡ ಸೇರಿದೆ. ನುರಿತ ವೀಣಾ ವಾದಕಿಯಾಗಿರುವ ಇವರು ಹಲವಾರು ಕಡೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸೀಮಾ ಮಲ್ಹೋತ್ರಾ ಅವರು ಕನ್ನಡಿಗರು ಯುಕೆ ಸಂಘಟನೆಯ ಸೇವೆಗಳನ್ನು ಪ್ರಶಂಸಿಸಿದರು. ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಶ್ರೇಷ್ಠತೆಯನ್ನು ವಿದೇಶದಲ್ಲಿ ಸಾರುತ್ತಿರುವ ಕನ್ನಡಿಗರ ತಂಡವನ್ನು ಅಭಿನಂದಿಸಿದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »