Karunadu Studio

ಕರ್ನಾಟಕ

Chikkaballapur Crime: ತಾಲೂಕಿನ ವರ್ಲಕೊಂಡ ಬಳಿ ಅಪಘಾತ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಸಾವು – Kannada News | Samata Sainik Dal state president dies in accident near Varlakonda in taluk


ಚಿಕ್ಕಬಳ್ಳಾಪುರ: ತಾಲೂಕಿನ ವರ್ಲಕೊಂಡ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಮತ ಸೈನಿಕ ದಳ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ಕಾರ್ಯಕ್ರಮ ನಿಮಿತ್ತ ಬಾಗೇಪಲ್ಲಿಗೆ ತೆರಳಿದ್ದ ಇವರು ಇನ್ನೋವಾ ಕಾರಿನಲ್ಲಿ ವಕೀಲ ಸ್ನೇಹಿತರ ಜೊತೆಗೂಡಿ ಬೆಂಗಳೂರಿನತ್ತ ಬರುತ್ತಿದ್ದರು. ವರ್ಲಕೊಂಡ ಸೇತುವೆ ಬಳಿ ಇನ್ನೊಬ್ಬ ಕಾರಿನ ಟೈಯರ್ ಸಿಡಿದ ಪರಿಣಾಮ ಕಾರು ಹತ್ತಾರು ಪಲ್ಟಿ ಯಾಗಿ ರಸ್ತೆಯ ಬಳಿಯ ಹಳ್ಳಕ್ಕೆ ಬಿದ್ದ ಪರಿಣಾಮ ಚೆನ್ನಕೃಷ್ಣಪ್ಪ ಸ್ಥಳದಲ್ಲೇ ಮೃತರಾಗಿದ್ದಾರೆ. 

ಇದನ್ನೂ ಓದಿ: ISI chief: ಪಾಕ್‌ನ ಐಎಸ್‌ಐ ಮುಖ್ಯಸ್ಥ ಅಸಿಮ್ ಮಲಿಕ್‌ನನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಕ

ಇವರ ಜೊತೆಗಿದ್ದವರು ವಕೀಲರೆಂದು ತಿಳಿದು ಬಂದಿದ್ದು ಅವರ ಹೆಸರು ಗೊತ್ತಿಲ್ಲ. ಈ ಅಪಘಾತ ದಲ್ಲಿ ಅವರಿಗೆ ಕೈ ಬೆರಳು ತುಂಡಾಗಿದೆ ಎಂಬ ಮಾಹಿತಿ ಇದ್ದು, ಘಟನಾ ಸ್ಥಳದಿಂದ ಅವರು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಇದೆ  ಈ ಘಟನೆ ಬುಧವಾರ ಸಂಜೆ ನಡೆದಿದ್ದು ಸ್ಥಳಕ್ಕೆ ಭೇಟಿ ನೀಡಿದ್ದ ಪೆರೇಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. 

ಈ ಘಟನೆ ಸಂಬಂಧಪಟ್ಟ ಮೃತ ಚೆನ್ನಕೃಷ್ಣಪ್ಪ ಅವರ ಮಗ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದು ಈ ಅಪಘಾತಕ್ಕೆ ಕಾರಣವೇನು ಎಂಬುದು ತನಿಖೆಯ ಬಳಿಕ ಗೊತ್ತಾಗಲಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »