ಉಡುಪಿ : ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಹತ್ಯೆ(Suhas Shetty Murder Case) ಬೆನ್ನಲ್ಲೇ ಪ್ರತಿಕಾರಕ್ಕಾಗಿ ಉಡುಪಿಯಲ್ಲೊಂದು ಡೆಡ್ಲಿ ಅಟ್ಯಾಕ್ ನಡೆದಿದೆ. ಉಡುಪಿಯಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಯತ್ನ(Mangalore Murder Case) ನಡೆದಿದೆ. ಉಡುಪಿ ತಾಲೂಕಿನ ಅತ್ರಾಡಿಯಲ್ಲಿ ಮುಸ್ಲಿಂ ಆಟೋ ಚಾಲಕ ಅಬೂಬಕ್ಕರ್ ಎಂಬುವರ ಮೇಲೆ ದಾಳಿಯಾಗಿದೆ. ಆಟೋ ಅಡ್ಡಗಟ್ಟಿ ಚಾಲಕ ಅಬೂಬಕ್ಕರ್ ಕೊಲೆಗೆ ಯತ್ನಿಸಲಾಗಿದೆ. ಇನ್ನು ದಾಳಿಗೆ ಯತ್ನಿಸಿದವರನ್ನು ಸುಶಾಂತ್, ಸಂದೇಶ್ ಪೂಜಾರಿ ಎಂದು ಗುರುತಿಸಲಾಗಿದೆ.
ಅಬೂಬಕ್ಕರ್ ನನ್ನು ಅಡ್ಡಗಟ್ಟಿ ಸುಶಾಂತ್, ಸಂದೇಶ್ ಪೂಜಾರಿ ಎಂಬುವರು ಕೊಲೆಗೆ ಯತ್ನಿಸಿದ್ದಾರೆ ಕೂಡಲೇ ಹಿರಿಯಡ್ಕ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಇಬ್ಬರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸುದ್ದಿಯನ್ನೂ ಓದಿ: Suhas Shetty Murder: ಸುಹಾಸ್ ಶೆಟ್ಟಿ ಕೊಲೆ; ಸೋಶಿಯಲ್ ಮೀಡಿಯಾದಲ್ಲೇ ಟಾರ್ಗೆಟ್ ಫಿಕ್ಸ್ ಮಾಡಿದ್ದ ಹಂತಕರು!