Karunadu Studio

ಕರ್ನಾಟಕ

Mangalore Murder Case: ಸುಹಾಸ್‌ ಹತ್ಯೆ ಬೆನ್ನಲ್ಲೇ ಪ್ರತೀಕಾರಕ್ಕಾಗಿ ನಡೆಯಿತಾ ಡೆಡ್ಲಿ ಅಟ್ಯಾಕ್‌? ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ – Kannada News | Attempted murder of Muslim youth in wake of Suhas Shetty murder Case


ಉಡುಪಿ : ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಬರ್ಬರ ಹತ್ಯೆ(Suhas Shetty Murder Case) ಬೆನ್ನಲ್ಲೇ ಪ್ರತಿಕಾರಕ್ಕಾಗಿ ಉಡುಪಿಯಲ್ಲೊಂದು ಡೆಡ್ಲಿ ಅಟ್ಯಾಕ್‌ ನಡೆದಿದೆ. ಉಡುಪಿಯಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಯತ್ನ(Mangalore Murder Case) ನಡೆದಿದೆ. ಉಡುಪಿ ತಾಲೂಕಿನ ಅತ್ರಾಡಿಯಲ್ಲಿ ಮುಸ್ಲಿಂ ಆಟೋ ಚಾಲಕ ಅಬೂಬಕ್ಕರ್ ಎಂಬುವರ ಮೇಲೆ ದಾಳಿಯಾಗಿದೆ. ಆಟೋ ಅಡ್ಡಗಟ್ಟಿ ಚಾಲಕ ಅಬೂಬಕ್ಕರ್ ಕೊಲೆಗೆ ಯತ್ನಿಸಲಾಗಿದೆ. ಇನ್ನು ದಾಳಿಗೆ ಯತ್ನಿಸಿದವರನ್ನು ಸುಶಾಂತ್, ಸಂದೇಶ್ ಪೂಜಾರಿ ಎಂದು ಗುರುತಿಸಲಾಗಿದೆ.

ಅಬೂಬಕ್ಕರ್ ನನ್ನು ಅಡ್ಡಗಟ್ಟಿ ಸುಶಾಂತ್, ಸಂದೇಶ್ ಪೂಜಾರಿ ಎಂಬುವರು ಕೊಲೆಗೆ ಯತ್ನಿಸಿದ್ದಾರೆ ಕೂಡಲೇ ಹಿರಿಯಡ್ಕ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಇಬ್ಬರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನೂ ಓದಿ: Suhas Shetty Murder: ಸುಹಾಸ್‌ ಶೆಟ್ಟಿ ಕೊಲೆ; ಸೋಶಿಯಲ್‌ ಮೀಡಿಯಾದಲ್ಲೇ ಟಾರ್ಗೆಟ್‌ ಫಿಕ್ಸ್‌ ಮಾಡಿದ್ದ ಹಂತಕರು!



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »