Karunadu Studio

ಕರ್ನಾಟಕ

DC vs SRH: ಡೆಲ್ಲಿ ಕ್ಯಾಪಿಟಲ್ಸ್‌ಗೆ ನೆರವಾದ ಮಳೆರಾಯ, ಪ್ಲೇಆಫ್ಸ್‌ನಿಂದ ಸನ್‌ರೈಸರ್ಸ್‌ ಹೈದರಾಬಾದ್‌ ಔಟ್‌! – Kannada News | Sunrisers Hyderabad Crash Out Of IPL 2025 Playoffs Race After Match vs DC Called Off Due To Rain


ಹೈದರಾಬಾದ್‌: ಡೆಲ್ಲಿ ಕ್ಯಾಪಿಟಲ್ಸ್‌ (Delhi capitals) ವಿರುದ್ದ ಸುಲಭವಾಗಿ ಗೆದ್ದು 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಪ್ಲೇಆಫ್ಸ್‌ ಆಸೆಯನ್ನು ಜೀವಂತವಾಗಿಸಿಕೊಳ್ಳುವ ಸನ್‌ರೈಸರ್ಸ್‌ ಹೈದರಾಬಾದ್‌ (SRH) ತಂಡದ ಕನಸನ್ನು ಮಳೆರಾಯ ಭಗ್ನಗೊಳಿಸಿದೆ. ಸೋಮವಾರ ಇಲ್ಲಿನ ರಾಜೀವ್‌ ಗಾಂಧಿ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಟೂರ್ನಿಯ 55ನೇ ಪಂದ್ಯ ಮಳೆಗೆ ಬಲಿಯಾಯಿತು. ಕಡಿಮೆ ಮೊತ್ತವನ್ನು ಕಲೆ ಹಾಕಿದ್ದ ಅಕ್ಷರ್‌ ಪಟೇಲ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ಸೋಲಿನ ದವಡೆಗೆ ಸಿಲುಕಿತ್ತು. ಆದರೆ, ಮಳೆ ಬಂದ ಕಾರಣ ಪಂದ್ಯದ ಫಲಿತಾಂಶ ಮೂಡಿ ಬರಲಿಲ್ಲ. ಹಾಗಾಗಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಮಳೆರಾಯನ ಕೃಪ ಕಟಾಕ್ಷದಿಂದ ಒಂದು ಅಂಕವನ್ನು ತನ್ನ ಖಾತೆಗೆ ಸೇರಿಸಿಕೊಂಡಿತು. ಆದರೆ, ಎಸ್‌ಆರ್‌ಎಚ್‌ಗೆ ಒಂದು ಅಂಕ ಸಿಕ್ಕರೂ ಯಾವುದೇ ಪ್ರಯೋಜನವಾಗಲಿಲ್ಲ. ಟೂರ್ನಿಯಿಂದ ಎಲಿಮಿನೇಟ್‌ ಆಯಿತು.

ತನ್ನ ತವರು ಅಂಗಣದಲ್ಲಿ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಟಾಸ್‌ ಗೆದ್ದಿದ್ದ ಪ್ಯಾಟ್‌ ಕಮನ್ಸ್‌ ನಾಯಕತ್ವದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ, ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನ ನೀಡಿತ್ತು. ಅದರಂತೆ ಪ್ಯಾಟ್‌ ಕಮಿನ್ಸ್‌ ಮಾರಕ ಬೌಲಿಂಗ್‌ ದಾಳಿಯ ಸಹಾಯದಿಂದ ಎಸ್‌ಆರ್‌ಎಚ್‌, ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 20 ಓವರ್‌ಗಳಿಗೆ 133 ರನ್‌ಗಳಿಗೆ ಕಟ್ಟಿ ಹಾಕಿತ್ತು. ಡೆಲ್ಲಿ ಪರ ಟ್ರಸ್ಟನ್‌ ಸ್ಟಬ್ಸ್‌ ಹಾಗೂ ಆಶುತೋಶ್‌ ಶರ್ಮಾ ತಲಾ 41 ರನ್‌ಗಳನ್ನು ಗಳಿಸಿದರು. ಇದರ ಫಲವಾಗಿ ಡೆಲ್ಲಿ 130 ರ ಗಡಿ ದಾಟಲು ಸಾಧ್ಯವಾಯಿತು. ಇಲ್ಲವಾದಲ್ಲಿ ಡಿಸಿ ಕನಿಷ್ಠ 100 ರನ್‌ ಕೂಡ ಗಳಿಸುತ್ತಿರಲಿಲ್ಲ. ಏಕೆಂದರೆ ಸ್ಟಾರ್‌ ಬ್ಯಾಟ್ಸ್‌ಮನ್‌ಗಳಾದ ಕರುಣ್‌ ನಾಯರ್‌, ಫಾಫ್‌ ಡು ಪ್ಲೆಸಿಸ್‌, ಅಭಿಷೇಕ್‌ ಪೊರೆಲ್‌, ಅಕ್ಷರ್‌ ಪಟೇಲ್‌ ಹಾಗೂ ಕೆಎಲ್‌ ರಾಹುಲ್‌ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು.

IPL 2025: ಸನ್‌ರೈಸರ್ಸ್‌ ಹೈದರಾಬಾದ್‌ಗೆ ಸೇರ್ಪೆಡಯಾದ ಹರ್ಷ್‌ ದುಬೆ!

ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಪರ ನಾಯಕ ಪ್ಯಾಟ್‌ ಕಮಿನ್ಸ್‌ ಮಾರಕ ಬೌಲಿಂಗ ದಾಳಿ ನಡೆಸಿ, ಪ್ರಮುಖ ಮೂವರು ಬ್ಯಾಟ್ಸ್‌ಮನ್‌ಗಳನ್ನು ಔಟ್‌ ಮಾಡಿದರು. ಅಗ್ರ ಕ್ರಮಾಂಕದ ಮೂವರು ಬ್ಯಾಟ್ಸ್‌ಮನ್‌ಗಳನ್ನು ಕಮಿನ್ಸ್‌ ಔಟ್‌ ಮಾಡಿ, ಡೆಲ್ಲಿಗೆ ಆರಂಭಿಕ ಆಘಾತ ನೀಡಿದ್ದರು. ಜಯದೇವ್‌ ಉನಾದ್ಕಟ್‌, ಹರ್ಷಲ್‌ ಪಟೇಲ್‌ ಹಾಗೂ ಇಶಾನ್‌ ಮಾಲಿಂಗ ತಲಾ ಒಂದೊಂದು ವಿಕೆಟ್‌ ಪಡೆದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »