Karunadu Studio

ಕರ್ನಾಟಕ

Viral Video: ರೈಲ್ವೆ ನಿಲ್ದಾಣದ ಮೆಟ್ಟಿಲುಗಳಲ್ಲಿ ಅಂಟಿಸಿದ ಪಾಕ್ ಧ್ವಜ ತೆಗೆದ ಮಹಿಳೆ- ನೆಟ್ಟಿಗರು ರಿಯಾಕ್ಷನ್‌ ಮಜವಾಗಿದೆ. – Kannada News | Viral Video: Woman removes Pakistani flag pasted on railway station steps


ಮುಂಬೈ: ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಸಹರಾನ್ಪುರದ ಗಂಗೋಹ್ ಪ್ರದೇಶದ ವಿದ್ಯಾರ್ಥಿನಿಯೊಬ್ಬಳು ಸಾರ್ವಜನಿಕ ರಸ್ತೆಯಲ್ಲಿ ಅಂಟಿಸಲಾದ ಪಾಕಿಸ್ತಾನದ ಧ್ವಜವನ್ನು ತೆಗೆದುಹಾಕಲು ಪ್ರಯತ್ನಿಸಿದ ವಿಡಿಯೊ ವೈರಲ್ ಆದ ಬಳಿಕ ಇದೀಗ ಮುಂಬೈನ ವಿಲೆ ಪಾರ್ಲೆ ರೈಲ್ವೆ ನಿಲ್ದಾಣದ ಹೊರಗೆ ಮೆಟ್ಟಿಲುಗಳ ಮೇಲೆ ಅಂಟಿಸಲಾಗಿದ್ದ ಪಾಕಿಸ್ತಾನದ ಧ್ವಜವನ್ನು ತೆಗೆಯಲು ಬುರ್ಖಾ ಧರಿಸಿದ್ದ ಮಹಿಳೆಯೊಬ್ಬಳು ಪ್ರಯತ್ನಿಸಿದ್ದಾಳೆ. ಇದರಿಂದ ಆ ಮಹಿಳೆ ಮತ್ತು ಜನಸಮೂಹದ ನಡುವೆ ಗಲಾಟೆ ನಡೆದಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾ ಪ್ಲಾಟ್‍ಫಾರ್ಮ್‍ಗಳಲ್ಲಿ ವೈರಲ್(Viral Video) ಆಗಿದೆ. ವೈರಲ್ ಆದ ವಿಡಿಯೊದಲ್ಲಿ, ಬುರ್ಖಾ ಧರಿಸಿದ ಮಹಿಳೆ ರೈಲ್ವೆ ನಿಲ್ದಾಣದ ಮೆಟ್ಟಿಲುಗಳ ಮೇಲೆ ಅಂಟಿಸಿದ ಧ್ವಜವನ್ನು ಕಿತ್ತು ತೆಗೆಯುವುದು ರೆಕಾರ್ಡ್ ಆಗಿದೆ. ಮಹಿಳೆಯ ಕೃತ್ಯದ ಬಗ್ಗೆ ಅಲ್ಲಿದ್ದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಇದರಿಂದ ಅವರ ನಡುವೆ ಮಾತಿನ ಚಕಮಕಿ ನಡೆದಿದೆಯಂತೆ.

ವಿಡಿಯೊ ಇಲ್ಲಿದೆ ನೋಡಿ…



ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ವಿಡಿಯೊ ನೋಡಿದ ನೆಟ್ಟಿಗರು ಮಹಿಳೆಯ ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.”ಫಾತಿಮಾ ಅಬ್ದುಲ್‌ಗಿಂತ ಹೆಚ್ಚು ಮತಾಂಧಳು. ನೆನಪಿಡಿ, ಅವರಿಗೂ ನಮ್ಮ ಭಾರತಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ. “ಭಾರತಕ್ಕಿಂತ ಹೆಚ್ಚಾಗಿ ಪಾಕಿಸ್ತಾನವನ್ನು ಪ್ರೀತಿಸುವ ಅಂತಹ ಜನರು ನಮ್ಮ ಸುತ್ತಲೂ ಇರುವವರೆಗೂ ಭಾರತೀಯರಾದ ನಾವು ನಮ್ಮ ನೆರೆಹೊರೆಯವರ ಶತ್ರುಗಳ ವಿರುದ್ಧ ಹೋರಾಡಲು ಎಂದಿಗೂ ಒಂದಾಗಲು ಸಾಧ್ಯವಿಲ್ಲ” ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.

ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ವಿದೇಶಿ ಪ್ರವಾಸಿಗರು ಸೇರಿದಂತೆ 26 ಜನರನ್ನು ಉಗ್ರರು ಗುಂಡಿಟ್ಟು ಕೊಂದ ಕಾರಣ ನೆರೆಯ ದೇಶದ ವಿರುದ್ಧ ಪ್ರತಿಭಟಿಸಿ ಪಾಕಿಸ್ತಾನದ ಧ್ವಜಗಳನ್ನು ಜನರು ನಡೆದಾಡುವ ಸ್ಥಳದಲ್ಲಿ ಅಂಟಿಸಲಾಗಿದೆ. ಪಾಕಿಸ್ತಾನದ ವಿರುದ್ಧದ ಕೋಪದಿಂದ ಜನರು ಧ್ವಜವನ್ನು ತುಳಿಯಲು ಅವಕಾಶ ನೀಡುವ ಸಾಂಕೇತಿಕ ಕೃತ್ಯವಾಗಿ ಈ ಪ್ರತಿಭಟನೆಯನ್ನು ಉದ್ದೇಶಿಸಲಾಗಿತ್ತು.

ಈ ಹಿಂದೆ, ಉತ್ತರ ಪ್ರದೇಶದ ಸಹರಾನ್ಪುರದ ಗಂಗೋಹ್ ಪ್ರದೇಶದ ವಿದ್ಯಾರ್ಥಿನಿಯೊಬ್ಬಳು ಸಾರ್ವಜನಿಕ ರಸ್ತೆಯಲ್ಲಿ ಅಂಟಿಸಲಾದ ಪಾಕಿಸ್ತಾನದ ಧ್ವಜವನ್ನು ತೆಗೆದುಹಾಕಲು ಪ್ರಯತ್ನಿಸುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆದ ನಂತರ ಆಕೆಯನ್ನು ಶಾಲೆಯಿಂದ ಹೊರಹಾಕಲಾಯಿತು.ಬಹದ್ದೂರ್ ನಗರದ 11ನೇ ತರಗತಿ ವಿದ್ಯಾರ್ಥಿನಿ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದಾಗ ರಸ್ತೆಯ ಮಧ್ಯದಲ್ಲಿ ಧ್ವಜ ಅಂಟಿಕೊಂಡಿರುವುದನ್ನು ಗಮನಿಸಿದ್ದಾಳೆ. ಧ್ವಜವನ್ನು ನೋಡಿದ ವಿದ್ಯಾರ್ಥಿನಿ ಸ್ಕೂಟಿ ನಿಲ್ಲಿಸಿ ಅದನ್ನು ತೆಗೆಯಲು ಪ್ರಯತ್ನಿಸಿದಳು. ಆಕೆಯ ಕೃತ್ಯಗಳನ್ನು ಹತ್ತಿರದ ಯಾರೋ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು, ಅದು ವೈರಲ್ ಆಗಿತ್ತು.

ಈ ಸುದ್ದಿಯನ್ನೂ ಓದಿ:Viral Video: ಏರ್‌ಪೋರ್ಟ್‌ನಲ್ಲಿ ‘ತೇರಿ ಮಿಟ್ಟಿ’ ಹಾಡಿಗೆ ಕೊಳಲು ನುಡಿಸಿದ ಮೆಹಬೂಬ್; ಭದ್ರತಾ ಸಿಬ್ಬಂದಿ ಮಾಡಿದ್ದೇನು?

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಏಪ್ರಿಲ್‍ 22ರಂದು ಲಷ್ಕರ್-ಸಂಬಂಧಿತ ಭಯೋತ್ಪಾದಕರು ಪ್ರವಾಸಿಗರ ಗುಂಪಿನ ಮೇಲೆ ಗುಂಡು ಹಾರಿಸಿದ್ದು, ವಿದೇಶಿ ಪ್ರವಾಸಿಗರು ಸೇರಿದಂತೆ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಲಷ್ಕರ್ ಅಂಗಸಂಸ್ಥೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಈ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಆದರೆ ನಂತರ ಭಾರಿ ಜಾಗತಿಕ ಆಕ್ರೋಶದ ನಂತರ ಹಿಂದೆ ಸರಿದಿದೆ.





Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »