Karunadu Studio

ಕರ್ನಾಟಕ

Operation Sindoor: ಜೆಇಎಂ ಮುಖ್ಯಸ್ಥ ಮಸೂದ್‌ ಅಜರ್‌ ಮದರಸಾ ಧ್ವಂಸ: ವಿಡಿಯೊ ವೈರಲ್ – Kannada News | Operation Sindoor: India Strikes Lashkar-e-Taiba HQ, Masood Azhar’s Madrasa


ನವದೆಹಲಿ: ಪಾಕಿಸ್ತಾನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನಾ ಪಡೆಗಳು ನಡೆಸಿದ ಸರಣಿ ದಾಳಿಯಲ್ಲಿ(Operation Sindoor) ಸುಮಾರು 80ಕ್ಕೂ ಹೆಚ್ಚು ಭಯೋತ್ಪಾದಕರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ದಾಳಿಯಲ್ಲಿ ಜೈಶ್‌ ಎ ಮೊಹಮ್ಮದ್‌ (ಜೆಇಎಂ) ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ನ ಮದರಾಸ(Masood Azhar’s Madrasa)ವನ್ನು ಕೂಡ ಧ್ವಂಸ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಕಿಸ್ತಾನಿ ನಾಗರಿಕನೊಬ್ಬ ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾನೆ.

ವೇರಲ್‌ ಆಗುತ್ತಿರುವ ಈ ವಿಡಿಯೊದಲ್ಲಿ ಪಾಕ್‌ನ ವ್ಯಕ್ತಿ, ‘ಭಾರತ ನಮ್ಮ ಮೇಲೆ ದಾಳಿ ಮಾಡಿದಾಗ ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ಎಲ್ಲಿ ಮಲಗಿದ್ದವು. ಯಾವುದೇ ಸಂದೇಹ ಬೇಡ ಬಹಾವಲ್ಪುರದಲ್ಲಿರುವ ಮಸೂದ್ ಅಜರ್‌ನ ಮದರಸಾ ಮೇಲೆ 4 ಕ್ಷಿಪಣಿಗಳಿಂದ ದಾಳಿ ಮಾಡಲಾಗಿದೆ’ ಎಂದು ಹೇಳಿದ್ದಾನೆ.



ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿ ನಡೆಸಿದ್ದು, ಈ ಬಗ್ಗೆ ಭಾರತೀಯ ಸೇನೆಯು ಇಂದು ಬೆಳಗ್ಗೆ 10 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದೆ.

ಸದ್ಯ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್‌ನಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಇಂದು ಮುಚ್ಚಲ್ಪಡುತ್ತವೆ. ಪಠಾಣ್‌ಕೋಟ್‌ನಲ್ಲಿರುವ ಎಲ್ಲಾ ಶಾಲೆಗಳು 72 ಗಂಟೆಗಳ ಕಾಲ ಮುಚ್ಚಲ್ಪಟ್ಟಿದೆ.



ಪಹಲ್ಗಾಮ್‌ ದಾಳಿಗೆ ಸೇಡು ತೀರಿಸಿಕೊಂಡಿರುವ ಭಾರತ ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿ ಉಗ್ರರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ. ಯಾವುದೇ ಸೂಚನೆ ಇಲ್ಲದೆ ಸುಮಾರು 20 ನಿಮಿಷಗಳ ಕಾಲ ನಡೆದ ಈ ದಾಳಿಯಿಂದ ಪಾಕ್‌ ಪತರುಗುಟ್ಟಿ ಹೋಗಿದೆ.

ಇದನ್ನೂ ಓದಿ Operation Sindoor: ಆಪರೇಷನ್‌ ಸಿಂಧೂರ್-‌ ರಕ್ಷಣಾ ಸಚಿವಾಲಯದಿಂದ ಇಂದು ಬೆಳಗ್ಗೆ 10ಗಂಟೆಗೆ ಮಹತ್ವದ ಸುದ್ದಿಗೋಷ್ಠಿ

ಪಾಕ್‌ ಪ್ರಧಾನಿ ಶಹಬಾಜ್‌ ಶರೀಫ್‌ ಟ್ವೀಟ್‌ ಮಾಡಿದ್ದು ‘ಭಾರತ ನಿಯಮ ಉಲ್ಲಂಘಿಸಿ ಪಾಕಿಸ್ತಾನದ ಐದು ಸ್ಥಳಗಳ ಮೇಲೆ ಹೇಡಿತನದ ದಾಳಿ ನಡೆಸಿದೆ. ಭಾರತ ಹೇರಿರುವ ಈ ಯುದ್ಧ ಕ್ರಮದ ವಿರುದ್ಧ ಶಕ್ತಿಯುವಾದ ಪ್ರತಿಕ್ರಿಯೆ ನೀಡುವ ಎಲ್ಲ ಹಕ್ಕುಗಳೂ ಪಾಕಿಸ್ತಾನಕ್ಕೆ ಇವೆ. ನಾವು ಕೂಡ ಅತ್ಯಂತ ಪ್ರಬಲ ಪ್ರತಿಕ್ರಿಯೆ ನೀಡುತ್ತೇವೆ. ಇಡೀ ದೇಶವು ಪಾಕಿಸ್ತಾನ ಸಶಸ್ತ್ರ ಪಡೆಗಳಿಗೆ ಬೆಂಬಲವಾಗಿ ನಿಂತಿದೆ. ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಚೆನ್ನಾಗಿ ಗೊತ್ತಿದೆ. ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.





Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »