Karunadu Studio

ಕರ್ನಾಟಕ

Operation Sindoor: ಆಪರೇಷನ್‌ ಸಿಂಧೂರ್‌ ಬೆನ್ನಲ್ಲೇ ಮೋದಿ ವಿದೇಶ ಪ್ರವಾಸ ರದ್ದು; ಅಮಿತ್‌ ಶಾ ರಿಯಾಕ್ಟ್‌ – Kannada News | PM Modi Cancels 3-Nation Trip After Operation Sindoor


ನವದೆಹಲಿ: ಇಂದು ಬೆಳಗಾಗುವ ಮುನ್ನವೇ ಪಾಕಿಸ್ತಾನದ (Operation Sindoor) 9 ಸ್ಥಳಗಳನ್ನು ಭಾರತ ದಾಳಿ ಮಾಡಿ ಪುಡಿಗಟ್ಟಿದೆ. ಮುಜಫರಾಬಾದ್, ಮುರ್ಡಿಕೆ, ಕೋಟ್ಲಿಯಲ್ಲಿರುವ ಭಯೋತ್ಪಾದಕರ ಪ್ರಮುಖ ಅಡುಗು ತಾಣಗಳು ಭಾರತೀಯ ಸೇನೆಯ ಕ್ಷಿಪಣಿ ದಾಳಿಗೆ ಧ್ವಂಸಗೊಂಡಿವೆ. ಇದೀಗ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ತಮ್ಮ ವಿದೇಶ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಈ ತಿಂಗಳು ಕೈಗೊಳ್ಳಬೇಕಿದ್ದ ಯುರೋಪ್ ಪ್ರವಾಸವನ್ನು ಮೋದಿ ರದ್ದುಗೊಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಕ್ರೊಯೇಷಿಯಾ, ನಾರ್ವೆ ಮತ್ತು ನೆದರ್‌ಲ್ಯಾಂಡ್ಸ್‌ ಸೇರಿ ಮೂರು ರಾಷ್ಟ್ರಗಳ ಭೇಟಿಯನ್ನು ಈ ತಿಂಗಳು ಮಾಡಬೇಕಿತ್ತು. ಆದರೆ ಭಾರತ ಪಾಕ್ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವುದರಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಇನ್ನು ಪ್ರಧಾನಿ ಮೋದಿ ವಿದೇಶ ಪ್ರವಾಸ ರದ್ದುಗೊಳ್ಳಲು ನಿಖರ ಕಾರಣ ಏನೆಂಬುದು ಇದುವರೆಗೆ ಯಾವುದೇ ಮಾಹಿತಿ ಇಲ್ಲ. ಆದರೆ ಆಪರೇಷನ್‌ ಸಿಂಧೂರ್‌ ಕಾರಣಕ್ಕಾಗಿಯೇ ಈ ಪ್ರವಾಸ ರದ್ದಾಗಿರುವಂತೆ ಕಂಡು ಬಂದಿದೆ.

ಈ ಸುದ್ದಿಯನ್ನೂ ಓದಿ: Operation Sindoor: ‘ರೆಡಿ ಟು ಸ್ಟ್ರೈಕ್’ ; ಆಪರೇಷನ್‌ ಸಿಂಧೂರ್‌ಗೂ ಮೊದಲು ಸೇನೆಯಿಂದ ಪೋಸ್ಟ್‌!

ಅಮಿತ್‌ ಶಾ ಪ್ರತಿಕ್ರಿಯೆ

ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಯನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಒಟ್ಟು 9 ಉಗ್ರರ ನೆಲೆಗಳನ್ನು ಗುರಿಯಾಗಿಸಿ ಬರೋಬ್ಬರಿ 24 ಕ್ಷಿಪಣಿ ದಾಳಿ ನಡೆಸಲಾಗಿತ್ತು. ಇನ್ನು ಈ ದಾಳಿ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ದಾಳಿಗೆ ಹರ್ಷ ವ್ಯಕ್ತಪಡಿಸಿರುವ ಅಮಿತ್‌ ಶಾ, ಅಮಾಯಕ ಭಾರತೀಯ ಸಹೋದರರ ಹತ್ಯೆಗೆ ಪ್ರತೀಕಾರ ಎಂದಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು ನನ್ನ ಅಮಾಯಕ ಭಾರತೀಯ ಸಹೋದರರ ಹತ್ಯೆಗೆ ನ್ಯಾಯ ಒದಗಿಸುವ ಸಲುವಾಗಿ ಉಗ್ರರು ಮತ್ತು ಅವರ ತಾಣಗಳನ್ನು ಧ್ವಂಸಗೊಳಿಸಿರುವ ಸೇನೆಯ ಕಾರ್ಯ ಶ್ಲಾಘನೀಯ ಎಂದು ಪೋಸ್ಟ್‌ ಮಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »