Karunadu Studio

ಕರ್ನಾಟಕ

ಪಾಕಿಸ್ತಾನದ ಮೇಲೆ ಪ್ರತಿ ದಾಳಿ ಆರಂಭಿಸಿದ ಭಾರತೀಯ ಸೇನೆ:‌ ಲಾಹೋರ್‌ನತ್ತ ಹೊರಟ ಕ್ಷಿಪಣಿ – Kannada News | Indian Army launches counter-attack on Pakistan


ಹೊಸದಿಲ್ಲಿ: ಪಾಕಿಸ್ತಾನದ ವಿರುದ್ದ ಭಾರತ ಮೇ 8ರಂದು 2ನೇ ದಿನವೂ ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಈ ಮಧ್ಯೆ ಪಾಕಿಸ್ತಾನವೂ ಪ್ರತಿ ದಾಳಿ ನಡೆಸಿ ಭಾರತೀಯ ಸೇನೆಯನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಿ ಸಂಪೂರ್ಣವಾಗಿ ವಿಫಲವಾಗಿದೆ. ಪಾಕ್‌ ಸೇನೆಯು ಭಾರತದ ವಾಯು ನೆಲೆಗಳ ಮೇಲೆ ವಾಯು ದಾಳಿ ನಡೆಸಿದೆ. ಆದರೆ ಭಾರತದ ಶಕ್ತಿಯುತ S 400 ಏರ್‌ ಡಿಫೆನ್ಸ್‌ ಸಿಸ್ಟಮ್ ವಿರೋಧಿ ಸೇನೆಯ ಅಷ್ಟೂ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಇತ್ತ ಭಾರತವೂ ಪ್ರತ್ಯುತ್ತರ ನೀಡಿದೆ. ಲಾಹೋರ್‌ ಮೇಲೆ ಕ್ಷಿಪಣಿ, ಡ್ರೋನ್‌ ದಾಳಿ ನಡೆಸಿದೆ.

ಪಾಕ್‌ ಪ್ರಯೋಗ ಮಾಡಿದ ಜೆಟ್‌, ಐವತ್ತಕ್ಕೂ ಹೆಚ್ಚು ಡ್ರೋನ್‌ಗಳು, ಶೆಲ್‌ ಮತ್ತು ಕ್ಷಿಪಣಿಗಳು ಟುಸ್‌ ಪಟಾಕಿಯಂತೆ ನೆಲಕ್ಕೆ ಉರುಳಿವೆ. ಪಾಕ್‌ನ ಅಷ್ಟು ದಾಳಿಯೂ ವಿಫಲವಾಗಿದ್ದು ಭಾರತದ ವಾಯು ನೆಲೆಗಳಾದ ಪಠಾಣ್‌ ಕೋಟ್‌, ಜೈಸಲ್ಮೇರ್‌ ಸುರಕ್ಷಿತವಾಗಿವೆ ಎಂಬ ಮಾಹಿತಿಯಿದೆ. ಜೈಸಲ್ಮೇರ್‌ನಲ್ಲಿ 200 ಕ್ಷಿಪಣಿ ದಾಳಿಗೆ ಪಾಕ್‌ ನವರು ಯತ್ನಿಸಿದರೂ ಅದು ವಿಫಲವಾಗಿದೆ. ಇನ್ನು ದಾಳಿ ನಡೆದ ವಿವಿಧ ನಗರಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದ್ದು ಬ್ಲ್ಯಾಕ್‌ ಔಟ್‌ ಘೋಷಿಸಲಾಗಿದೆ. ಸ್ಥಳೀಯ ನಾಗರಿಕರನ್ನು ಸುರಕ್ಷಿತವಾದ ಜಾಗಕ್ಕೆ ಸ್ಥಳಾಂತರಿಸಲಾಗಿದೆ. ಸ್ವತಃ ಪಾಕಿಸ್ತಾನದ ಸೇನೆಯು ಭಾರತ ಜೆಟ್‌ ವಿಮಾನಗಳನ್ನು ಹೊಡೆದುರುಳಿಸಿರುವುದನ್ನು ಖಚಿತಪಡಿಸಿದೆ.

ಭಾರತದಿಂದ ಪ್ರತಿ ದಾಳಿ: ಲಾಹೋರ್‌, ಸಿಯಾಲ್‌ಕೋಟ್‌ನತ್ತ ಹೊರಟ ಕ್ಷಿಪಣಿ, ಡ್ರೋನ್‌

ಭಾರತದ ಗಡಿಯಿಂದ 24 ಕಿ.ಮೀ ದೂರದಲ್ಲಿರುವ ಲಾಹೋರ್‌ನತ್ತ ಭಾರತದ ಕ್ಷಿಪಣಿಗಳು ಧಾವಿಸಿವೆ. ಜತೆಗೆ ಸಿಯಾಲ್‌ಕೋಟ್‌ ಮೇಲೂ ದಾಳಿ ನಡೆಸಿದೆ. ಉಗ್ರ ನೆಲೆಯನ್ನು ಗುರಿಯಾಗಿಸಿ ಈ ದಾಳಿ ನಡೆಯುತ್ತಿದೆ. ಈ ಮೂಲಕ ಭಾರತದ ಸೇನೆಯು ಪಾಕಿಸ್ತಾನಕ್ಕೆ ಖಡಕ್‌ ಉತ್ತರ ನೀಡಲು ಮುಂದಾಗಿದೆ. ಲಾಹೋರ್‌ನಲ್ಲಿ ಬೀಡು ಬಿಟ್ಟಿರುವ ಲಷ್ಕರ್‌ ಎ ತಯ್ಯಬ ಮುಖ್ಯಸ್ಥ ಉಗ್ರಗಾಮಿ ಹಫೀಸ್‌ ಸಯೀದ್‌ ಮನೆಯನ್ನು ಭಾರತೀಯ ಸೇನೆ ಟಾರ್ಗೆಟ್‌ ಮಾಡಿದೆ. ಅವನ ಮನೆಯನ್ನು ಧ್ವಂಸಗೊಳಿಸುವ ಎಲ್ಲಾ ಮುನ್ಸೂಚನೆಯೂ ಇದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »