Karunadu Studio

ಕರ್ನಾಟಕ

India-Pakistan Tensions: ಪಾಕ್‌ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಸೆರೆ? – Kannada News | India-Pakistan Tensions: Pakistan Army Chief Asim Munir Arrested?


ಇಸ್ಲಾಮಾಬಾದ್‌: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ(India-Pakistan Tensions) ಹೆಚ್ಚುತ್ತಿರುವ ಮಧ್ಯೆ, ಪಾಕಿಸ್ತಾನ ತನ್ನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್(Asim Munir) ಅವರನ್ನು ಬದಲಿಸಲು ನಿರ್ಧರಿಸಿದೆ ಹಾಗೂ ಅವರನ್ನು ಬಂಧನದಲ್ಲಿ ಇರಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಅಸಿಮ್ ಮುನೀರ್ ಕಾಶ್ಮೀರವು ಪಾಕ್‌ನ ಕಂಠನಾಳ ಎಂದಿದ್ದರು. ಅವರ ಈ ಹೇಳಿಕೆಯೇ ಪಾಕಿಸ್ತಾನಿ ಉಗ್ರರು ಪಹಲ್ಗಾಂ(pahalgam attack) ಮೇಲೆ ದಾಳಿ ನಡೆಸಲು ಕಾರಣವಾಯಿತು ಎಂದು ಹೇಳಲಾಗಿತ್ತು.

ಭಾರತದ ಆಪರೇಶನ್‌ ಸಿಂದೂರ ದಾಳಿಯನ್ನು ಹಿಮ್ಮೆಟ್ಟಿಸಲು ಅವರು ವಿಫಲರಾದರು ಎಂಬ ಆಕ್ರೋಶ ಪಾಕಿಸ್ತಾನದಲ್ಲಿ ನೆಲೆಸಿದೆ. ಹೀಗಾಗಿ ಅವರನ್ನು ಬಂಧಿಸಿ ಪದಚ್ಯುತಿ ಮಾಡಲಾಗಿದೆ ಎನ್ನಲಾಗಿದೆ. ಸಾಹಿರ್ ಶಂಶಾದ್ ಮಿರ್ಜಾ ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ನೇಮಿಸುವ ಸಾಧ್ಯತೆಯಿದೆ.

ಗುರುವಾರ ರಾತ್ರಿ ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಪಂಜಾಬ್‌, ಜಮ್ಮು-ಕಾಶ್ಮೀರ ಹಾಗೂ ರಾಜಸ್ಥಾನದ ಮೇಲೆ ನೂರಾರು ಕ್ಷಿಪಣಿ, ಡ್ರೋನ್‌ ಹಾಗೂ ರಾಕೆಟ್‌ ಮೂಲಕ ದಾಳಿ ಮಾಡಿತ್ತು. ಪ್ರತಿ ದಾಳಿ ಮಾಡಿದ ಭಾರತ, ಲಾಹೋರ್ ಹಾಗೂ ಸಿಯಾಲ್‌ಕೋಟ್‌ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಜೊತೆಗೆ ಮೊದಲ ಬಾರಿಗೆ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ ಮತ್ತು ಪಾಕಿಸ್ತಾನದ ಪಂಜಾಬ್‌ ವಾಯುನೆಲೆಗಳ ಮೇಲೆ ಸೇನೆ ದಾಳಿ ನಡೆಸಿದೆ. ಭಾರತದ ದಾಳಿ ಪಾಕ್‌ ಅಕ್ಷರಶಃ ತತ್ತರಿಸಿ ಹೋಗಿದೆ.

ಇದನ್ನೂ ಓದಿ India-Pakistan Tensions: ಸಿಎ ಅಂತಿಮ, ಮಧ್ಯಂತರ, ಅರ್ಹತಾ ಕೋರ್ಸ್ ಪರೀಕ್ಷೆ ಮುಂದೂಡಿಕೆ

ಭಾರತದ 15 ನಗರಗಳನ್ನು ಗುರಿಯಾಗಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ಭಾರತದ ವಾಯುರಕ್ಷಣಾ ವ್ಯವಸ್ಥೆಯಾದ ಸುದರ್ಶನ ಚಕ್ರ ಗಡಿಯಲ್ಲೇ ತಡೆದು ಈ ಮೂಲಕ ಒಂದೇ ಒಂದು ಕ್ಷಿಪಣಿ ಭಾರತ ಪ್ರವೇಶಿಸದಂತೆ ಭದ್ರತೆ ಒದಗಿಸಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »