Karunadu Studio

ಕರ್ನಾಟಕ

Operation sindoor: ವಿಜಯಪುರದಲ್ಲಿ ಪಾಕ್ ಪರ ವಿದ್ಯಾರ್ಥಿನಿ ಪೋಸ್ಟ್; ದೂರಿನ ಬೆನ್ನಲ್ಲೇ ಯೂಟರ್ನ್! – Kannada News | Pro-Pakistan Muslim student posts post in Vijayapura


ವಿಜಯಪುರ: ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಸ್ಥಿತಿ (Operation sindoor) ನಿರ್ಮಾಣವಾಗಿರುವ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನದ ಪರ ಪೋಸ್ಟ್‌ ಹಾಕಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕ್‌ ಪರ ಪ್ರೇಮ ಮೆರೆದಿರುವುದಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿದ್ದು, ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯಪುರ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ದಂತ ವೈದ್ಯಕೀಯ ವಿದ್ಯಾರ್ಥಿನಿ ತಷಾವುದ್ಧ್ ಫಾರೂಖಿ ಶೇಖ್‌ ಎಂಬಾಕೆ ಪಾಕ್ ಪರ ಪೋಸ್ಟ್ ಹಾಕಿದ್ದಾಳೆ. ” ನನ್ನ ಪಾಕಿಸ್ತಾನಿ ಸ್ನೇಹಿತರೇ, ಐಒಜೆಕೆ, ಎಜೆಕೆ ಜನರೇ, ಗಡಿಯ 200 ಕಿ.ಮೀ ವ್ಯಾಪ್ತಿಯಲ್ಲಿ ನೀವು ಓಡಾಡಬೇಡಿ, ದಯವಿಟ್ಟು ಒಳನಾಡಿಗೆ ಹೋಗಿ. ಅಲ್ಲಾಹ್ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸುತ್ತಾನೆ” ಎಂದು ಪಾಕ್ ಧ್ವಜದೊಂದಿಗೆ ಪೋಸ್ಟ್ ಹಾಕಿದ್ದಾಳೆ.

ಈ ಪೋಸ್ಟ್‌ಗೆ ಹಿಂದುಪರ ಸಂಘಟನೆಗಳು ಸೇರಿ ನೆಟ್ಟಿಗರಿಂದ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಇದರ ಬೆನ್ನಲ್ಲೇ ವಿದ್ಯಾರ್ಥಿನಿ ಯೂಟರ್ನ್ ಹೊಡೆದಿದ್ದು, ಕ್ಷಮೆಯಾಚಿಸಿ ಪೋಸ್ಟ್ ಮಾಡಿದ್ದಾಳೆ.

ನನ್ನ ಪೋಸ್ಟ್ ಬಹಳಷ್ಟು ಜನರಿಗೆ ನೋವು ತಂದಿದೆ. ನಾನು ಎಲ್ಲರಿಗೂ ಹೃದಯಪೂರ್ವಕವಾಗಿ ಕ್ಷಮೆಯಾಚಿಸುತ್ತೇನೆ. ಭಾರತೀಯಳಾದ‌ ನಾನು ನನ್ನ ದೇಶವನ್ನು ಪ್ರೀತಿಸುತ್ತೇನೆ, ಭಾರತದಲ್ಲಿ ಹುಟ್ಟಿ ಬೆಳೆದಿದ್ದು, ಇದು ನನ್ನ ತಾಯ್ನಾಡು. ನನ್ನ ಮೂರ್ಖತನದ ಪೋಸ್ಟ್‌ಗೆ ನಾನು ಮತ್ತೊಮ್ಮೆ ಎಲ್ಲರಿಗೂ ಕ್ಷಮೆಯಾಚಿಸುತ್ತೇನೆ. ಇನ್ಮುಂದೆ ಎಂದಿಗೂ ತಪ್ಪು ಮಾಡುವುದಿಲ್ಲ‌ ಎಂದು ಪ್ರಮಾಣ ಮಾಡುತ್ತೇನೆ, ಜೈ ಹಿಂದ್’ ಎಂದು ಭಾರತದ ಧ್ವಜ ಚಿತ್ರದೊಂದಿಗೆ ವಿದ್ಯಾರ್ಥಿನಿ ಪೋಸ್ಟ್ ಮಾಡಿದ್ದಾಳೆ.

ಈ ಸುದ್ದಿಯನ್ನೂ ಓದಿ | Operation Sindoor: ಭಾರತದ ಕ್ಷಿಪಣಿ ದಾಳಿ ಏಕೆ ತಡೆಯಲಿಲ್ಲ? ಪಾಕ್‌ ರಕ್ಷಣಾ ಮಂತ್ರಿ ಹೇಳಿದ್ದೇನು ಗೊತ್ತಾ? ವಿಡಿಯೋ ನೋಡಿ



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »