Karunadu Studio

ಕರ್ನಾಟಕ

Pahalgam Terror Attack: ಪಹಲ್ಗಾಮ್ ದಾಳಿ ಕೇಂದ್ರದ ಪೂರ್ವ ನಿಯೋಜಿತ ಕೃತ್ಯ ಎಂದ ವ್ಯಕ್ತಿ ವಿರುದ್ಧ ಕೇಸ್‌ – Kannada News | Case filed against a person described as the perpetrator of the planned attack in Pahalgam


ಕೋಲಾರ: ಪಹಲ್ಗಾಮ್ ಉಗ್ರರ ದಾಳಿಯನ್ನು (Pahalgam Terror Attack) ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ ಕೃತ್ಯ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕೋಲಾರದ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೋಲಾರದ ಕುಂಬಾರ ಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬಾತ ವಿಡಿಯೋ ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದ. ಈ ಸಂಬಂಧ ಕೋಲಾರದ ಗಲ್ ಪೇಟೆ ಠಾಣೆ ಪೊಲೀಸರು ಮುನೀರ್ ಖಾನ್ ಖುರೇಷಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಹಿಂದೂ ಮತಗಳ ಕ್ರೋಡೀಕರಿಸಲು ಮೋದಿ ಸರ್ಕಾರ ಯತ್ನಿಸುತ್ತಿದೆ ಎಂದು ಈತ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಸುಳ್ಳು ಸುದ್ದಿ ಹಬ್ಬಿಸಿದ್ದ. ಮುನೀರ್ ಖಾನ್, ಚಿಕನ್ ಅಂಗಡಿಯ ಮಾಲೀಕನಾಗಿದ್ದು, ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವಿಡಿಯೋದಲ್ಲಿ, ಪಹಲ್ಗಾಮ್ ದಾಳಿಯನ್ನು ಕೇಂದ್ರ ಸರ್ಕಾರದ ಪೂರ್ವ ಯೋಜಿತ ಕೃತ್ಯ. ಬಿಹಾರ ಚುನಾವಣೆಯಲ್ಲಿ ಹಿಂದೂಗಳ ಮತ ಗಳಿಸಲು ಈ ದಾಳಿ ನಡೆಸಲಾಗಿದೆ ಎಂದು ಹೇಳಿದ್ದ.

ಈ ವಿಡಿಯೋ ಸಾರ್ವಜನಿಕರಲ್ಲಿ ಗೊಂದಲ, ಅಶಾಂತಿ ಹಾಗೂ ಕೋಮು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದ್ದ ಕಾರಣ, ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಕೋಮು ಗಲಭೆ ತಡೆಗಟ್ಟಲು ಯೂಟ್ಯೂಬ್‌ನಿಂದ ಆ ವಿಡಿಯೋವನ್ನು ತೆಗೆದುಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಏಪ್ರಿಲ್ 22ರಂದು ಉಗ್ರರು ಪ್ರವಾಸಿಗರ ಮೇಲೆ ದಾಳಿ ಮಾಡಿದ್ದರು. ಧರ್ಮ ಕೇಳಿ ಕೇಳಿ ಹಿಂದೂಗಳನ್ನೇ ಗುಂಡಿಕ್ಕಿ ಹತ್ಯೆಗೈದಿದ್ದರು. ಈ ಕೃತ್ಯವನ್ನು ವಿಶ್ವದ ಹಲವು ದೇಶಗಳು ಖಂಡಿಸಿದ್ದವು. ಇದರ ನಡುವೆ ಕೋಲಾರದ ಮುನೀರ್, ಇದು ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ ಕೃತ್ಯ. ಬಿಹಾರದ ಚುನಾವಣೆಯಲ್ಲಿ ಹಿಂದೂಗಳ ಮತ ಬ್ಯಾಂಕ್​ ಸೆಳೆಯಲು ಈ ರೀತಿ ಮಾಡಲಾಗಿದೆ ಎಂದು ವಿಡಿಯೋ ಮಾಡಿ ಯುಟ್ಯೂಬ್​​ನಲ್ಲಿ ಹರಿಬಿಟ್ಟಿದ್ದ.​ ಹೀಗಾಗಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Operation Sindoor: ರಾತ್ರಿಯಾಗುತ್ತಿದ್ದಂತೆ ಪಾಕಿಸ್ತಾನದಿಂದ ದಾಳಿ; ಪಂಜಾಬ್‌ನಲ್ಲಿ ಡ್ರೋನ್‌ ಸ್ಫೋಟಗೊಂಡು ಮೂವರಿಗೆ ಗಾಯ



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »