Karunadu Studio

ಕರ್ನಾಟಕ

Ceasefire Violations: ಭಾರತದ ಪ್ರತೀಕಾರ ತಡೆದುಕೊಳ್ಳುತ್ತಾ ಪಾಕಿಸ್ತಾನ? ಕದನ ವಿರಾಮ ಉಲ್ಲಂಘನೆಗೆ ಬೆಲೆ ತೆರಲಿದೆ ಪಾಕ್‌ – Kannada News | India’s Full Statement On Ceasefire Violations By Pakistan


ಹೊಸದಿಲ್ಲಿ: ಪಾಕಿಸ್ತಾನ ಕೊನೆಗೂ ತನ್ನ ನೀಚ ಬುದ್ಧಿಯನ್ನು ತೋರಿಸಿದೆ. ಮೇ 10ರಂದು ಭಾರತದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಅದು ಕೆಲವೇ ಕ್ಷಣಗಳಲ್ಲಿ ಅದನ್ನು ಮುರಿದು ಕತ್ತಲಾಗುತ್ತಿದ್ದಂತೆ ಭಾರತದ ಮೇಲೆ ದಾಳಿ ನಡೆಸಿದೆ (Ceasefire Violations). ಭಾರತೀಯ ಸೇನೆ ಈ ದಾಳಿಯನ್ನು ದಿಟ್ಟವಾಗಿ ಎದುರಿಸಿದ್ದು, ನುಗ್ಗಿ ಬಂದ ಡ್ರೋನ್‌ಗಳನ್ನು ಆಗಸದಲ್ಲೇ ಪುಡಿಗೈದಿದೆ. ಜತೆಗೆ ಪಾಕಿಸ್ತಾನಕ್ಕೆ ದಿಟ್ಟ ಪ್ರತ್ಯುತ್ತರ ನೀಡುವುದಾಗಿ ತಿಳಿಸಿದೆ. ಪಾಕ್‌ನ ಕದನ ವಿರಾಮ ಉಲ್ಲಂಘನೆಯ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ (Vikram Misri), ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಫೋಟದ ಸದ್ದು ಕೇಳಿದ್ದು, ಗಡಿ ರಾಜ್ಯಗಳಲ್ಲಿ ಪಾಕ್‌ ಡ್ರೋನ್‌ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

ಸೇನೆಗೆ ಪೂರ್ಣ ಅಧಿಕಾರ ಒದಗಿಸಲಾಗಿದ್ದು, ಇದೀಗ ಸೂಕ್ತ ಪ್ರತ್ಯುತ್ತರ ನೀಡುತ್ತಿದೆ ಎಂದು ಹೇಳಿದ್ದಾರೆ. ನುಗ್ಗಿ ಬಂದ ಡ್ರೋನ್‌ಗಳೆಲ್ಲವನ್ನೂ ಹೊಡೆದುರುಳಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.



ಈ ಸುದ್ದಿಯನ್ನೂ ಓದಿ: India Pakistan news live Update: ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನದ ವಿರುದ್ಧ ಸೂಕ್ತ ಕ್ರಮ: ವಿಕ್ರಮ್‌ ಮಿಸ್ರಿ

ವಿಕ್ರಮ್‌ ಮಿಸ್ರಿ ಹೇಳಿದ್ದೇನು?

ʼʼಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವೆ ಮೇ 10ರ ಸಂಜೆ ನಡೆದ ಕದನ ವಿರಾಮದ ಉಲ್ಲಂಘನೆ ಕಳೆದ ಕೆಲವು ಗಂಟೆಗಳಿಂದ ಪದೇ ಪದೆ ನಡೆಯುತ್ತಿದೆ. ಈ ಉಲ್ಲಂಘನೆಗಳಿಗೆ ಭಾರತೀಯ ಸಶಸ್ತ್ರ ಪಡೆಗಳು ಸಮರ್ಪಕ ಮತ್ತು ಸೂಕ್ತ ಪ್ರತಿಕ್ರಿಯೆಯನ್ನು ನೀಡುತ್ತಿವೆ ಮತ್ತು ಈ ಉಲ್ಲಂಘನೆಗಳನ್ನು ನಾವು ಬಹಳ ಗಂಭೀರವಾಗಿ ಗಮನಿಸುತ್ತೇವೆ. ಈ ಉಲ್ಲಂಘನೆಗಳನ್ನು ಪರಿಹರಿಸಲು ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಪಾಕಿಸ್ತಾನಕ್ಕೆ ಸೂಚನೆ ನೀಡಿದ್ದೇವೆ. ಸಶಸ್ತ್ರ ಪಡೆಗಳು ಗಡಿಯುದ್ದಕ್ಕೂ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿವೆ. ಅಂತಾರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆಯ ಉದ್ದಕ್ಕೂ ನಡೆಯುವ ಕದನ ವಿರಾಮ ಉಲ್ಲಂಘನೆಗಳ ಬಲವಾಗಿ ಎದುರಿಸಲು ಅವರಿಗೆ ಸೂಚನೆಗಳನ್ನು ನೀಡಲಾಗಿದೆʼʼ ಎಂದು ಹೇಳಿದ್ದಾರೆ.



ಸೆಂಟ್ರಿಗೆ ಗಾಯ

ಜಮ್ಮುವಿನ ನಾಗ್ರೋಟಾ ಸೇನಾ ಶಿಬಿರದ ಬಳಿ ಶನಿವಾರ ಶಂಕಿತ ವ್ಯಕ್ತಿಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಸೆಂಟ್ರಿಯೊಬ್ಬರು ಗಾಯಗೊಂಡಿದ್ದಾರೆ. ಈ ಮಧ್ಯೆ ‍‍ಶ್ರೀನಗರದಾದ್ಯಂತ ಭಾರಿ ಸ್ಫೋಟದ ಸದ್ದು ಕೇಳಿ ಬಂದಿದೆ.





Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »