Karunadu Studio

ಕರ್ನಾಟಕ

Operation Sindoor: ಹುತಾತ್ಮ ಯೋಧರ ತ್ಯಾಗ ಈ ದೇಶ ಸದಾ ಸ್ಮರಿಸಲಿದೆ; ರಾಜೀವ್‌ ಘಾಯ್‌ – Kannada News | ‘Their Sacrifices Won’t Be Forgotten’: Officials Pay Tributes To 5 Heroes Killed In Pakistani Aggression


ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪ್ರಾರಂಭಿಸಲಾದ ‘ಆಪರೇಷನ್ ಸಿಂದೂರ್'(Operation Sindoor) ನಲ್ಲಿ ಹುತಾತ್ಮರಾದ ಭಾರತೀಯ ಐವರು ಯೋಧರ ತ್ಯಾಗ, ಬಲಿದಾನಗಳನ್ನು ಈ ದೇಶ ಸದಾ ಸ್ಮರಿಸಲಿದೆ ಎಂದು ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕ (ಡಿಜಿಎಂಒ) ಲೆಫ್ಟಿನಂಟ್‌ ಜನರಲ್‌ ರಾಜೀವ್‌ ಘಾಯ್‌(Lieutenant General Rajiv Ghai) ಹೇಳಿದ್ದಾರೆ.

ಕದನ ವಿರಾಮಕ್ಕೆ ಸಂಬಂಧಿಸಿದಂತೆ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7 ರಿಂದ ಮೇ 10 ರವರೆಗೆ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್‌ ಜತೆಗಿನ ಸಂಘರ್ಷದಲ್ಲಿ ಭಾರತೀಯ ಸೇನೆಯು 5 ಸೈನಿಕರನ್ನು ಕಳೆದುಕೊಂಡಿತು. ಸಶಸ್ತ್ರ ಪಡೆಗಳ ಈ 5 ಸಹೋದ್ಯೋಗಿಗಳಿಗೆ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗಗಳನ್ನು ಯಾವಾಗಲೂ ಸ್ಮರಿಸಲಾಗುವುದು ಎಂದರು.

ಪಾಕಿಸ್ತಾನ ಸೇನೆಯ 35–40 ಯೋಧರು ಗಡಿ ನಿಯಂತ್ರಣ ರೇಖೆಯ ಬಳಿ ಹತ್ಯೆಯಾಗಿದ್ದಾರೆ. ಇನ್ನಷ್ಟು ಸಾವು ನೋವಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

“ನಮ್ಮ ಗುರಿಗಳು ಭಯೋತ್ಪಾದನೆ ಆಧಾರಿತವಾಗಿದ್ದವು. ಆದರೆ ಪಾಕ್‌ ಸೇನೆ ನಮ್ಮ ಮೂಲಸೌಕರ್ಯದ ಮೇಲೆ ವಾಯು ಒಳನುಸುಳುವಿಕೆ ಮತ್ತು ವಾಯು ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ ಕಾರಣ ಪ್ರತಿ ದಾಳಿ ನಡೆಸಲಾಯಿತು ಇದರಿಂದ ಪಾಕ್‌ ಸೈನಿಕರು ಸಾವನ್ನಪ್ಪಿದರು” ಎಂದು ತಿಳಿಸಿದರು.

ಕಮಾಂಡರ್‌ಗಳಿಗೆ ಸಂಪೂರ್ಣ ಅಧಿಕಾರ

ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸಿದರೆ ಪ್ರತಿದಾಳಿ ನಡೆಸುವಂತೆ ಭಾರತ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಸೇನಾ ಕಮಾಂಡರ್‌ಗಳಿಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ.

ಶನಿವಾರ ಕದನ ವಿರಾಮ ಒಪ್ಪಂದ ಮಾಡಿಕೊಂಡರೂ, ಪಾಕ್‌ ಮತ್ತೆ ಭಾರತದ ಮೇಲೆ ಟ್ರೋನ್‌ ಮತ್ತು ಶೆಲ್‌ ದಾಳಿ ನಡೆಸಿತ್ತು. ಶನಿವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರ, ಪಂಜಾಬ್‌, ರಾಜಸ್ಥಾನ ಮತ್ತು ಗುಜರಾತ್‌ ಗಡಿಪ್ರದೇಶಗಳಲ್ಲಿ ಡ್ರೋನ್‌ ದಾಳಿಗೆ ಪಾಕ್‌ ಯತ್ನ ನಡೆಸಿದ್ದು, ಭಾರತ ತಕ್ಕ ಪ್ರತ್ಯುತ್ತರ ನೀಡಿತ್ತು. ಇನ್ನೊಮ್ಮೆ ಪಾಕ್‌ ಗಡಿಯಲ್ಲಿ ಇದೇ ರೀತಿ ದಾಳಿ ನಡೆಸಿದರೆ ನಿರ್ದಾಕ್ಷಿಣ್ಯವಾಗಿ ಪ್ರತಿದಾಳಿ ನಡೆಸುವಂತೆ ಸೇನಾ ಕಮಾಂಡರ್‌ಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ.

ಇದನ್ನೂ ಓದಿ Operation Sindoor: ಕಾಶ್ಮೀರದಲ್ಲಿ ಸಿಲುಕಿದ್ದ ಕರ್ನಾಟಕದ 13 ವಿದ್ಯಾರ್ಥಿಗಳನ್ನು ಕರೆತರಲು ಎಚ್‌ಡಿಕೆ ನೆರವು



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »