Karunadu Studio

ಕರ್ನಾಟಕ

ED Raid: ಗೃಹ ಸಚಿವ ಡಾ. ಜಿ ಪರಮೇಶ್ವರ್ ಒಡೆತನದ ಸಂಸ್ಥೆ ಮೇಲೆ ಇಡಿ ದಾಳಿ – Kannada News | ED Raid on institutions owned by home minister G Parameshwar in Tumkur


ತುಮಕೂರು: ಗೃಹ ಸಚಿವ ಡಾ. ಜಿ ಪರಮೇಶ್ವರ್ (Home minister G Parameshwar) ಒಡೆತನದ ತುಮಕೂರಿನ (Tumkur news) ಸಿದ್ದಾರ್ಥ ಕಾಲೇಜಿನ (Siddhartha College) ಮೇಲೆ ಇಡಿ ಅಧಿಕಾರಿಗಳು ದಾಳಿ (ED Raid) ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. 5 ಕಾರುಗಳಲ್ಲಿ ಬಂದ ಇಡಿ ಅಧಿಕಾರಿಗಳು ಸಂಸ್ಥೆಯ​ ಕಚೇರಿಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಸಿದ್ದಾರ್ಥ ಶಿಕ್ಷಣ ಸಂಸ್ಥೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಒಡೆತನಕ್ಕೆ ಸೇರಿದೆ. ತುಮಕೂರಿನಲ್ಲಿರುವ ಎಸ್‌ಎಸ್‌ಐಟಿ ಕಾಲೇಜು ಹಾಗೂ ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ 5 ಇನ್ನೋವಾ ಕಾರುಗಳಲ್ಲಿ ಸಿದ್ದಾರ್ಥ ಕಾಲೇಜಿಗೆ ಬಂದಿಳಿದ ಇಡಿ ಅಧಿಕಾರಿಗಳು, ಪ್ರಿನ್ಸಿಪಾಲ್ ಕಚೇರಿಗೆ ತೆರಳಿದ್ದು, ಕಚೇರಿಯಲ್ಲಿನ ಕಡತನಗಳನ್ನು ಪರಿಶೀಲಿಸುತ್ತಿದ್ದಾರೆ.

ಗೃಹ ಸಚಿವ ಜಿ ಪರಮೇಶ್ವರ್​ ಹೇಳಿದ್ದೇನು?

ಬೆಂಗಳೂರಿನಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರು ತಮ್ಮದೇ ಆದ ಸಿದ್ದಾರ್ಥ ವಿದ್ಯಾಸಂಸ್ಥೆ ಮೇಲಿನ ಇಡಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ, ಡಾ.ಜಿ‌.ಪರಮೇಶ್ವರ್ ಅವರು ಪತ್ನಿ ಕನ್ನಿಕಾ ಜೊತೆ ತೆರಳಿದ್ದಾರೆ.

ಇದನ್ನೂ ಓದಿ: Aishwarya Gowda: ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ 14 ದಿನ ಇಡಿ ಕಸ್ಟಡಿಗೆ



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »