Karunadu Studio

ಕರ್ನಾಟಕ

MI vs PBKS Qualifier 2: ಮಳೆಯಿಂದ ಕ್ವಾಲಿಫೈಯರ್‌-2 ಪಂದ್ಯ ರದ್ದಾದರೆ ಮುಂಬೈ ಔಟ್‌ – Kannada News | MI vs PBKS Qualifier 2 : What will happen if rain plays spoilsport in Qualifier 2? Explained


ಅಹಮದಾಬಾದ್‌: ಭಾನುವಾರ ಅಹಮದಾಬಾದ್‌ನಲ್ಲಿ ಕ್ವಾಲಿಫೈಯರ್‌-2(IPL Qualifier 2) ಪಂದ್ಯ ನಡೆಯಲಿದೆ. ಕ್ವಾಲಿಫೈಯರ್‌-1ರಲ್ಲಿ ಆರ್‌ಸಿಬಿ ವಿರುದ್ಧ ಸೋತ ಪಂಜಾಬ್‌ ಕಿಂಗ್ಸ್‌(MI vs PBKS Qualifier 2 ) ಹಾಗೂ ಎಲಿಮಿನೇಟರ್‌ನಲ್ಲಿ ಗೆದ್ದ ಮುಂಬೈ ತಂಡಗಳು ಸೆಣಸಾಡಲಿವೆ. ಅದರಲ್ಲಿ ಗೆದ್ದ ತಂಡ ಜೂ.3ರಂದು ಅಹಮದಾಬಾದ್‌ನಲ್ಲಿ ಆರ್‌ಸಿಬಿ ವಿರುದ್ಧ ಫೈನಲ್‌ನಲ್ಲಿ ಆಡಲಿದೆ. ಆದರೆ ಕ್ವಾಲಿಫೈಯರ್‌-2ರ ಪಂದ್ಯ ಮಳೆಯಿಂದ ರದ್ದಾದರೆ ಯಾವ ತಂಡ ಫೈನಲ್‌ ಪ್ರವೇಶಿಸಲಿದೆ ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಇಲ್ಲಿದೆ.

ರದ್ದಾದರೆ ಮುಂಬೈ ಔಟ್‌

ನಾಳೆ ನಡೆಯುವ ಕ್ವಾಲಿಫೈಯರ್‌-2 ಪಂದ್ಯಕ್ಕೆ ಸದ್ಯ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಹಾಗಿದ್ದರೂ ಹವಾಮಾನ ವೈಪರೀತ್ಯದಿಂದ ಮಳೆಯಾಗಿ ಪಂದ್ಯ ರದ್ದಾದರೆ ಮುಂಬೈ ತಂಡ ಹೊರಬೀಳಲಿದೆ. ಪಂಜಾಬ್‌ ನೇರವಾಗಿ ಫೈನಲ್‌ ಪವೇಶಿಸಲಿದೆ. ಹೌದು ಐಪಿಎಲ್‌ ಮಳೆ ನಿಯಮದ ಪ್ರಕಾರ ಫೈನಲ್‌ ಪಂದ್ಯಕ್ಕೆ ಮಾತ್ರ ಮೀಸಲು ದಿನ ಇದೆ. ಲೀಗ್‌ ಪಂದ್ಯಗಳಲ್ಲಿ ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದು ಅಂಕ ನೀಡಲಾತ್ತು. ಆದರೆ ಕ್ವಾಲಿಫೈಯರ್‌ ಅಥವಾ ಎಲಿಮಿನೇಟರ್‌ ಪಂದ್ಯ ಮಳೆಯಿಂದ ರದ್ದಾದರೆ ಅಂಕಪಟ್ಟಿಯಲ್ಲಿ ಮೇಲಿರುವ ತಂಡವನ್ನು ನೇರವಾಗಿ ಮುಂದಿನ ಹಂತಕ್ಕೆ ತೇರ್ಗಡೆ ಮಾಡಲಾಗುತ್ತದೆ. ಅದರಂತೆ ನಾಳಿನ ಪಂದ್ಯ ರದ್ದಾದರೆ ಲೀಗ್‌ನಲ್ಲಿ ಅಗ್ರಸ್ಥಾನಿಯಾಗಿದ್ದ ಪಂಜಾಬ್‌ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಮುಂಬೈ ಎಲಿಮಿನೇಟರ್‌ ಗೆದ್ದರೂ ಹೊರಬೀಳಲಿದೆ. ಏಕೆಂದರೆ ಮುಂಬೈ ಲೀಗ್‌ ಹಂತದಲ್ಲಿ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿತ್ತು.

ಇದನ್ನೂ ಓದಿ IPL 2025: ಸಿಕ್ಸರ್‌ ದಾಖಲೆ ಬರೆದ ಹಿಟ್‌ಮ್ಯಾನ್‌ ರೋಹಿತ್‌

ಹೆಡ್-ಟು-ಹೆಡ್

ಪಂಜಾಬ್ ಮತ್ತು ಮುಂಬೈ ಇದುವರೆಗೆ ಪರಸ್ಪರ 32 ಐಪಿಎಲ್ ಪಂದ್ಯಗಳನ್ನು ಆಡಿವೆ. ಈ ಪೈಕಿ ಮುಂಬೈ ತಂಡ 17 ಮತ್ತು ಪಂಜಾಬ್‌ 15 ಪಂದ್ಯಗಳನ್ನು ಗೆದ್ದಿದೆ. ಹಾಲಿ ಆವೃತ್ತಿಯಲ್ಲಿ ಒಂದು ಆಡಿದ ಒಂದು ಪಂದ್ಯದಲ್ಲಿ ಪಂಜಾಬ್ ತಂಡ ಮುಂಬೈ ವಿರುದ್ಧ 7 ವಿಕೆಟ್‌ ಅಂತರದಿಂದ ಗೆದ್ದು ಬೀಗಿತ್ತು. ಈ ಸೋಲಿಗೆ ಮುಂಬೈ ಸೇಡು ತೀರಿಸಲು ಕಾದು ಕುಳಿತಿದೆ.

ಪಂಜಾಬ್‌ ಪ್ಲೇ ಆಫ್/ನಾಕೌಟ್‌ ಸಾಧನೆ

2008 – ಎಲಿಮಿನೇಟರ್ (ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 9 ವಿಕೆಟ್‌ಗಳ ಸೋಲು)

2014 – ಫೈನಲ್ಸ್ (ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 3 ವಿಕೆಟ್‌ಗಳ ಸೋಲು)

2025- ಮೊದಲ ಕ್ವಾಲಿಫೈಯರ್‌ನಲ್ಲಿ ಆರ್‌ಸಿಬಿ ವಿರುದ್ಧ 8 ವಿಕೆಟ್‌ಗಳ ಸೋಲು



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »