Karunadu Studio

ಕರ್ನಾಟಕ

Kamal Hassan: ತಮಿಳು ನಟ ಕಮಲಾಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು : ಕರವೇ ತಾಲೂಕು ಅಧ್ಯಕ್ಷ ಜಿ.ಎಲ್.ಆಶ್ವತ್ಥ್ ನಾರಾಯಣ ಆಗ್ರಹ – Kannada News | Tamil actor Kamal Haasan should apologize to Kannadigas


ಗೌರಿಬಿದನೂರು : ಕನ್ನಡ ಭಾಷೆಯ ಬಗ್ಗೆ ವಿವಾದ್ಮಾತಕ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿರುವ ತಮಿಳು ನಟ ಕಮಲಹಾಸನ್ ಅವರ ಹೇಳಿಕೆ ನಿಜಕ್ಕೂ ಖಂಡ ನೀಯ ಎಂದು ಕರವೇ ತಾಲೂಕು ಅಧ್ಯಕ್ಷ ಜಿ.ಎಲ್.ಆಶ್ವತ್ಥ್ ನಾರಾಯಣ ತಿಳಿಸಿದರು. ನಗರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕನ್ನಡ ಭಾಷೆಗೆ ಎರಡುಸಾವಿರದ ಐನೂರು ವರ್ಷಗಳ ಇತಿಹಾಸ ಹಾಗೂ ಪರಂಪರೆ ಇದೆ. ಇದರ ಪರಿವೇ ಇಲ್ಲದೆ ತಮಿಳು ನಟ ಕಮಲಹಾಸನ್ ವಿವಾದ್ಮಾಕ ಹೇಳಿಕೆಯಾದ ತಮಿಳು ಭಾಷೆಯಿಂದ ಕನ್ನಡ ಭಾಷೆ ತಾಳಿದೆ ಎಂದು ಹೇಳಿರುವುದು ನಿಜಕ್ಕೂ ಖಂಡನೀಯ ಮತ್ತು ಹಾಸ್ಯಾಸ್ಪದ ಎಂದರು.ಇದಕ್ಕೆ ಇಂಬು ನೀಡುವಂತೆ ಅವರ ಪರ ಹೇಳಿಕೆ ನೀಡಿರುವ ಕೆಲವು ಕನ್ನಡ ನಟರ ನಡೆಯೂ ಕೂಡ ನಿಜಕ್ಕೂ ಖಂಡನೀಯ ಎಂದು ಕಿಡಿಕಾರಿದರು.

ಇದನ್ನೂ ಓದಿ: Chikkanayakanahalli News: ಸಂಪೂರ್ಣ ಅಧಿಕಾರ ನಿಮ್ಮ ಕೈಯಲ್ಲಿದೆ, ಪಕ್ಷಾತೀತವಾಗಿ ಪಂಚಾಯಿತಿಗಳ ಅಭಿವೃದ್ಧಿಗೆ ಒತ್ತು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು

ಜವಾಬ್ದಾರಿಯುತ ಸ್ಥಾನದಲ್ಲಿರುವ ನಟನೊಬ್ಬ ತನ್ನದಲ್ಲದ ಭಾಷೆಯ ಬಗ್ಗೆ ಪಂಡಿತನAತೆ ಹೇಳಿಕೆ ನೀಡುವುದು ಸರಿಯಲ್ಲ.ಇದು ನಿಜವೇ ಆಗಿದ್ದಲ್ಲಿ ಆತ ತನ್ನ ಹೇಳಿಕೆಗೆ ದಾಖಲೆ ಒದಗಿಸಬೇಕು. ಇಲ್ಲವಾದಲ್ಲಿ ಈ ಕೂಡಲೆ ಕನ್ನಡಿಗರ ಕ್ಷೇಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದ ಅವರು ಮೊಂಡುಹಠ ಮಾಡಿದಲ್ಲಿ ರಾಜ್ಯವ್ಯಾಪ್ತಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರವೇ ಸಂಘಟನೆಯ ಪ್ರಭು, ಬಾಲಕೃಷ್ಣ, ಛತ್ರಂ ಶ್ರೀಧರ್. ಮುಂತಾದವರು ಹಾಜರಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »