Karunadu Studio

ಕರ್ನಾಟಕ

RCB celebrations: ಆರ್‌ಸಿಬಿ ವಿಜಯೋತ್ಸವದ ವೇಳೆ ಬೈಕ್‌ಗಳು ಡಿಕ್ಕಿಯಾಗಿ ಯುವಕ ಸಾವು – Kannada News | A youth died in a bike collision during the RCB victory celebration


ಶಿವಮೊಗ್ಗ: ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ತಂಡ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಅಭಿಮಾನಿಗಳ ಸಂಭ್ರಮಾಚರಣೆ (RCB celebrations) ಮುಗಿಲು ಮುಟ್ಟಿತ್ತು. ಈ ನಡುವೆ ಸಂಭ್ರಮಾಚರಣೆಗೆ ಹೊರಟಿದ್ದಾಗ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಯುವಕ ಮೃತಟ್ಟಿದ್ದಾನೆ. ವೆಂಕಟೇಶ ನಗರದ ನಿವಾಸಿ ಅಭಿನಂದನ್ (21) ಮೃತ ಯುವಕ.

ಉಷಾ ನರ್ಸಿಂಗ್‌ ಹೋಂ ಸರ್ಕಲ್‌ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತ ಸಂಭವಿಸಿದೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್‌ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇನ್ನೊಂದು ಬೈಕ್​ನಲ್ಲಿದ್ದ ಮಿಥುನ್​​​ ಹಾಗೂ ಅಭಿಷೇಕ್​​​ ಗಾಯಗೊಂಡಿದ್ದಾರೆ.

ಮಂಗಳವಾರ ರಾತ್ರಿ RCB ಟೀಂ ಗೆಲುವು ಸಾಧಿಸುತ್ತಿದ್ದಂತೆ ಯುವಕರು, ಕ್ರಿಕೆಟ್​​ ಪ್ರೇಮಿಗಳು ಉಷಾ ನರ್ಸಿಂಗ್​ ಹೋಂ ಬಳಿ ಸಂಭ್ರಮಾಚರಣೆ ನಡೆಸುತ್ತಿದ್ದರು. ನೂರು ಅಡಿ ರಸ್ತೆ ರವೀಂದ್ರ ನಗರದ ಕಡೆ ರಸ್ತೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಕುಣಿಯುತ್ತಿದ್ದರು. ಈ ವೇಳೆ ಮಿಥುನ್ ಹಾಗೂ ಅಭಿಷೇಕ್ ತಮ್ಮ ಬೈಕ್​ನಲ್ಲಿ ಉಷಾ ನರ್ಸಿಂಗ್​ ಹೋಂ ಕಡೆಯಿಂದ ವಿನೋಬನಗರ ಕಡೆಗೆ ಹೋಗುತ್ತಿದ್ದಾಗ, ಅದೇ ಕಡೆಯಿಂದ ಅಭಿಷೇಕ್​​ ಬರುತ್ತಿದ್ದು ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿವೆ. ಈ ವೇಳೆ ಅಭಿಷೇಕ್​ ಸ್ಥಳದಲ್ಲೇ ಮೃತಪಟ್ಟದ್ದಾನೆ.

ಈ ಸುದ್ದಿಯನ್ನೂ ಓದಿ | RCB vs PBKS Final: ಆರ್‌ಸಿಬಿ ಮೊದಲ ಫೈನಲ್‌ ಸೋಲಿಗೂ, ಚೊಚ್ಚಲ ಟ್ರೋಫಿ ಗೆಲುವಿಗೂ ಇದೆ ಸಾಮ್ಯತೆ

ಸಂಭ್ರಮಾಚರಣೆ ವೇಳೆ ಹೃದಯಾಘಾತ- RCB ಅಭಿಮಾನಿ ಸಾವು!

RCB Fan

ಬೆಳಗಾವಿ: ಮೊದಲ ಬಾರಿಗೆ ಐಪಿಎಲ್ 18ನೇ ಆವೃತ್ತಿಯ ಚಾಂಪಿಯನ್ಸ್ ಆಗಿ ಆರ್‌ಸಿಬಿ ಹೊರಹೊಮ್ಮಿದ್ದು, ಆರ್‌ಸಿಬಿ ಫ್ಯಾನ್ಸ್‌ ಸಂಭ್ರಮ ಮುಗಿಲು ಮುಟ್ಟಿದೆ. ಇದೀಗ ಈ ಸಂಭ್ರಮಾಚರಣೆ ನಡುವೆಯೇ ಬೆಳಗಾವಿಯಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಬೆಳಗಾವಿಯಲ್ಲಿ ಸಂಭ್ರಮಾಚರಣೆಯ ವೇಳೆ ಆರ್‌ಸಿಬಿಯ ಕಟ್ಟಾ ಅಭಿಮಾನಿ ಡ್ಯಾನ್ಸ್ ಮಾಡುತ್ತಲೇ, ಕುಸಿದು ಬಿದ್ದು ಹೃದಯಾಘಾತದಿಂದ(Heart attack) ಸಾವನ್ನಪ್ಪಿದ್ದಾನೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಿನ್ನೆ ರಾತ್ರಿ ಆರ್ ಸಿ ಬಿ ಗೆದ್ದ ಬಳಿಕ ಸಂಭ್ರಮಾಚರಣೆಯ ವೇಳೆ ಆರ್‌ಸಿಬಿ ಫ್ಯಾ ಅಭಿಮಾನಿಯಾಗಿದ್ದ ಮಂಜುನಾಥ್ ಈರಪ್ಪ ಕಂಬಾರ್ (28) ಹೃದಯಾಘಾತದಿಂದ ಸಾವನಪ್ಪಿದ್ದಾನೆ. ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಆರ್‌ಸಿಬಿ ಗೆಲವು ಸಂಭ್ರಮಾಚರಣೆಯ ವೇಳೆ ಕುಣಿಯುತ್ತಲೇ, ಕುಸಿದು ಬಿದ್ದು ಮಂಜುನಾಥ್ ಸಾವನಪ್ಪಿದ್ದಾನೆ.

ಈ ಸುದ್ದಿಯನ್ನೂ ಓದಿ: IPL 2025 Final: ಆರ್‌ಸಿಬಿ-ಪಂಜಾಬ್‌ ಫೈನಲ್‌ ಪಂದ್ಯಕ್ಕೂ ಮುನ್ನ ನಿರ್ದೇಶಕ ರಾಜಮೌಳಿ ಭಾವನಾತ್ಮಕ ಪೋಸ್ಟ್‌

ಮೃತ ಮಂಜುನಾಥ ಕೆ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಹುಚ್ಚು ಅದರಲ್ಲೂ ಐಪಿಎಲ್ ಅಂತ ಬಂದರೆ ಆರ್ ಸಿ ಬಿ ಆತನ ನೆಚ್ಚಿನ ತಂಡವಾಗಿತ್ತು. ಆರ್‌ಸಿಬಿ ಗೆದ್ದ ಕೂಡಲೇ ಗ್ರಾಮದ ಯುವಕರೊಂದಿಗೆ ಮಕ್ಕಳೊಂದಿಗೆ ಕುಣಿದು ಸಂಭ್ರಮಾಚರಣೆ ಮಾಡುತ್ತಿರುವ ವೇಳೆ, ಕುಸಿದು ಬಿದ್ದು ಮಂಜುನಾಥ್ ಸಾವನಪ್ಪಿದ್ದಾನೆ. ಮೃತ ಮಂಜುನಾಥಗೆ ಆರು ತಿಂಗಳ ಹೆಣ್ಣು ಮಗುವಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »