Karunadu Studio

ಕರ್ನಾಟಕ

Tendulkar-Anderson Trophy: ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಗೆ ‘ತೆಂಡೂಲ್ಕರ್‌-ಆ್ಯಂಡರ್ಸನ್‌’ ಹೆಸರು! – Kannada News | Tendulkar-Anderson Trophy for England-India series


ಲಂಡನ್‌: ಬಹುನಿರೀಕ್ಷಿತ ಭಾರತ ಮತ್ತು ಇಂಗ್ಲೆಂಡ್‌(IND vs ENG Test) ನಡುವಿನ ಟೆಸ್ಟ್‌(IND vs ENG Test Series) ಸರಣಿಗೆ ಮರುನಾಮಕರಣ ಮಾಡಲಾಗಿದೆ. ಎರಡು ದೇಶಗಳ ದಿಗ್ಗಜ ಆಟಗಾರರಾದ ಸಚಿನ್‌ ತೆಂಡೂಲ್ಕರ್‌ ಹಾಗೂ ಜೇಮ್ಸ್‌ ಆ್ಯಂಡರ್ಸನ್‌ ಗೌರವಾರ್ಥ ‘ತೆಂಡೂಲ್ಕರ್‌-ಆ್ಯಂಡರ್ಸನ್‌’ ಸರಣಿ(Tendulkar-Anderson Trophy) ಎಂದು ಹೆಸರಿಡಲಾಗಿದೆ. ಈ ಹಿಂದೆ ಇತ್ತಂಡಗಳ ಸರಣಿಯನ್ನು ಪಟೌಡಿ ಟ್ರೋಫಿ ಎಂದು ಕರೆಯಲಾಗುತ್ತಿತ್ತು. 2007ರಲ್ಲಿ ಉಭಯ ದೇಶಗಳ ನಡುವಿನ ಟೆಸ್ಟ್‌ಗೆ 75 ವರ್ಷ ಪೂರ್ಣಗೊಂಡಾಗ ಈ ಹೆಸರನ್ನು ಇಡಲಾಗಿತ್ತು. ಇನ್ನು ಮುಂದೆ ಈ ಸರಣಿ ‘ತೆಂಡೂಲ್ಕರ್‌-ಆ್ಯಂಡರ್ಸನ್‌’ ಹೆಸರಿನಿಂದ ಕರೆಯಲ್ಪಡುತ್ತದೆ.

ಭಾರತದ ಇಂಗ್ಲೆಂಡ್ ಪ್ರವಾಸವು ಜೂನ್ 20 ರಂದು ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ಆರಂಭಿಕ ಟೆಸ್ಟ್‌ನೊಂದಿಗೆ ಆರಂಭವಾಗಲಿದೆ. ಎಡ್ಜ್‌ಬಾಸ್ಟನ್, ಲಾರ್ಡ್ಸ್, ಓಲ್ಡ್ ಟ್ರಾಫರ್ಡ್ ಮತ್ತು ಕೆನ್ನಿಂಗ್ಟನ್ ಓವಲ್ ಉಳಿದ ನಾಲ್ಕು ಟೆಸ್ಟ್‌ಗಳನ್ನು ಆಯೋಜಿಸಲಿವೆ.

ಇಂಗ್ಲೆಂಡ್‌ ಲಯನ್ಸ್‌ ತಂಡದೆದುರಿನ ದ್ವಿತೀಯ ಅನಧಿಕೃತ ಟೆಸ್ಟ್‌ ಪಂದ್ಯ ಶುಕ್ರವಾರದಿಂದ ಆರಂಭವಾಗಲಿದೆ. ಈ ಪಂದ್ಯದಲ್ಲಿ ಕೆಎಲ್‌ ರಾಹುಲ್‌ ಆಡುವ ಸಾಧ್ಯತೆಯಿದೆ. ಇಂಗ್ಲೆಂಡ್‌ ವಾತಾವರಣಕ್ಕೆ ಹೊಂದಿಕೊಳ್ಳುವ ಉದ್ದೇಶದಿಂದ ರಾಹುಲ್‌ ಅನಧಿಕೃತ ಟೆಸ್ಟ್‌ನಲ್ಲೂ ಆಡುವ ಸಾಧ್ಯತೆಯಿದೆ.

ಇಂಗ್ಲೆಂಡ್‌ ತಂಡ

ಬೆನ್ ಸ್ಟೋಕ್ಸ್ (ನಾಯಕ), ಶೋಯೆಬ್ ಬಶೀರ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಸ್ಯಾಮ್ ಕುಕ್, ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಜೇಮೀ ಓವರ್ಟನ್, ಓಲಿ ಪೋಪ್, ಜೋ ರೂಟ್, ಜೇಮೀ ಸ್ಮಿತ್, ಜೋಶ್ ಟಂಗ್, ಕ್ರಿಸ್ ವೋಕ್ಸ್.

ಭಾರತ ಟೆಸ್ಟ್ ತಂಡ

ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್(ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್‌ ಬುಮ್ರಾ(ಕೆಲವು ಪಂದ್ಯಕ್ಕೆ ಮಾತ್ರ), ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್.

ಇದನ್ನೂ ಓದಿ IPL 2025: ʻಫೈನಲ್‌ನಲ್ಲಿ ಅಪರಾಧವೆಸಗಿದ ಶ್ರೇಯಸ್‌ ಅಯ್ಯರ್‌ʼ-ಯೋಗರಾಜ್‌ ಸಿಂಗ್‌ ಆರೋಪ!



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »