Karunadu Studio

ಕರ್ನಾಟಕ

Bengaluru stampede case: ಬೆಂಗಳೂರು ಕಾಲ್ತುಳಿತ ಕೇಸ್‌; ಬಿಜೆಪಿ ಉಗ್ರ ಪ್ರತಿಭಟನೆ- ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ – Kannada News | Bengaluru stampede case: BJP protest against Congress


ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ(Bengaluru stampede case) ಖಂಡಿಸಿ ರಾಜ್ಯ ಬಿಜೆಪಿ ಇಂದು ಪ್ರತಿಭಟನೆ(BJP protest) ನಡೆಸಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ಸಂಸದರು, ಎಂಎಲ್ ಸಿಗಳು ಪಾಲ್ಗೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದ್ದಾರೆ. ಅಲ್ಲದೇ 11ಜನರನ್ನು ಬಲಿ ಪಡೆದ ಈ ಘೋರ ದುರಂತಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಕಿಡಿ ಕಾಡಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಇನ್ನು ವಿಧಾನಸೌಧದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ಟ್‌ ಮಾಡಲಾಗಿದೆ.

ಈ ಸುದ್ದಿಯನ್ನೂ ಓದಿ: Bengaluru stampede: ಕಾಲ್ತುಳಿತ ದುರಂತ; 11 ಮೃತರ ಕುಟುಂಬಕ್ಕೆ ಪರಿಹಾರ ತಲಾ 25 ಲಕ್ಷಕ್ಕೆ ಹೆಚ್ಚಿಸಲು ಸಿಎಂ ಆದೇಶ

ಇನ್ನು ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದ 11 ಮಂದಿಯ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಈ ಮೊದಲು ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು. ಇದೀಗ ಪರಿಹಾರ ಮೊತ್ತ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ನಡೆದ ದುರಂತದಲ್ಲಿ 11 ಜನರು ಸಾವಿಗೀಡಾಗಿದ್ದರು. ಅವರ ಕುಟುಂಬಗಳಿಗೆ ಈ ಮೊದಲು ತಲಾ 10 ಲಕ್ಷ ರೂ. ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಅಲ್ಲದೆ ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನೂ ಸರಕಾರ ಭರಿಸಲಿದೆ ಎಂದು ಹೇಳಿದ್ದರು. ಅದೇ ರೀತಿ ಮೃತರಿಗೆ ಆರ್‌ಸಿಬಿ 10 ಲಕ್ಷ ಹಾಗೂ ಕೆಎಸ್‌ಸಿಎ 5 ಲಕ್ಷ ಪರಿಹಾರವನ್ನು ಘೋಷಿಸಿತ್ತು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »