Karunadu Studio

ಕರ್ನಾಟಕ

Suhas Shetty Murder Case: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿದ ಕೇಂದ್ರ ಸರ್ಕಾರ – Kannada News | The central government has handed over the investigation of the Suhas Shetty murder case to the NIA


ಮಂಗಳೂರು: ರೌಡಿಶೀಟರ್ ಹಾಗೂ ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ (Suhas Shetty Murder Case) ತನಿಖೆಯನ್ನು ಕೇಂದ್ರ ಗೃಹ ಇಲಾಖೆಯು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಿದೆ. ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬಜಪೆಯ ಕಿನ್ನಿಪದವು ಎಂಬಲ್ಲಿ ಮೇ 1ರಂದು ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿದ್ದರು.

ಮಂಗಳೂರು ಪೊಲೀಸ್‌ನ ಸಿಸಿಬಿ ಘಟಕ ಈ ಪ್ರಕರಣದ ತನಿಖೆ ನಡೆಸುತ್ತಿತ್ತು. ಸಿಸಿಬಿ ಈ ಪ್ರಕರಣದಲ್ಲಿ ಒಟ್ಟು 12 ಆರೋಪಿಗಳನ್ನು ಬಂಧಿಸಿದೆ. ಬಜಪೆಯ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು.

ಕೇಂದ್ರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಧನ್ಯವಾದ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಐಗೆ ವರ್ಗಾಯಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಧನ್ಯವಾದ ತಿಳಿಸಿದ್ದಾರೆ. ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಈಗ ಎಸ್‌ಡಿಪಿಐನ ಕಾರ್ಯಕರ್ತರಾಗಿ ತಮ್ಮ ಚಟುವಟಿಕೆಗಳನ್ನು ಮುಂದುವರಿಸಿದ್ದು, ಇಂತಹ ದೇಶ ವಿರೋಧಿ ಶಕ್ತಿಗಳನ್ನು ಕಿತ್ತುಹಾಕುವಂತೆ ಹತ್ಯೆ ನಡೆದ ತತ್ ಕ್ಷಣ ಕೇಳಿಕೊಂಡಿದ್ದೆ. ದಕ್ಷಿಣ ಕನ್ನಡದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವಲ್ಲಿ ನಾವುಗಳು ಸಕ್ರಿಯವಾಗಿ ಪಾಲ್ಗೊಳ್ಳಲು ಇಂತಹ ಅಂಶಗಳನ್ನು ಬುಡ ಸಮೇತ ಕಿತ್ತು ಹಾಕುವುದು ಅತ್ಯಗತ್ಯ ಎಂದು ಪೋಸ್ಟ್ ಮಾಡಿದ್ದಾರೆ.







Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »