Karunadu Studio

ಕರ್ನಾಟಕ

Dog Meat Biryani: ಮಂಡ್ಯದಲ್ಲಿ ಬೌ ಬೌ ಬಿರಿಯಾನಿ ನೀಡಿದ ಆರೋಪ; ಹೋಟೆಲ್‌ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿತ – Kannada News | Allegation of serving dog meat biryani in Mandya


ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಹೋಟೆಲ್‌ ಒಂದರಲ್ಲಿ ಗ್ರಾಹಕರಿಗೆ ನಾಯಿ ಮಾಂಸದ ಬಿರಿಯಾನಿ (Dog Meat Biryani) ನೀಡಿರುವ ಆರೋಪ ಕೇಳಿಬಂದಿದೆ. ಬಿರಿಯಾನಿ ರುಚಿಯಲ್ಲಾದ ವ್ಯತ್ಯಾಸದಿಂದ ಮಾಲೀಕ ಸಿಕ್ಕಿಬಿದ್ದಿದ್ದಾನೆ. ಇದರಿಂದ ಸ್ಥಳೀಯರು ಹೋಟೆಲ್ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆಜಾದ್ ಎಂಬಾತ ತನ್ನ ಹೋಟೆಲ್‌ನಲ್ಲಿ ಬಿರಿಯಾನಿಗೆ ನಾಯಿ ಮಾಂಸ ಬೆರೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮದೀನಾ ಹೋಟೆಲ್‌ನಲ್ಲಿ ಬಿರಿಯಾನಿಗೆ ನಾಯಿ ಮಾಂಸ ಬೆರಿಸಿ, ಅದನ್ನು ಗ್ರಾಹಕರಿಗೆ ಗೊತ್ತಿಲ್ಲದಂತೆ ಕೊಟ್ಟಿದ್ದಾರೆ ಎನ್ನಲಾಗಿದೆ.

ಬಿರಿಯಾನಿಗೆ ನಾಯಿ ಮಾಂಸ ಬೆರೆಸುತ್ತಿದ್ದಾರೆ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಜನರು ಆಕ್ರೋಶಗೊಂಡಿದ್ದಾರೆ. ಹೋಟೆಲ್ ಮಾಲೀಕ ಆಜಾದ್‌ನನ್ನು ಹಿಡಿದು ಥಳಿಸಿದ್ದಾರೆ. ಆದರೆ ಇದು ನಾಯಿ ಮಾಂಸವಲ್ಲ ಎಂದು ಆಜಾದ್ ಹೇಳಿದ್ದಾರೆ. ಬಳಿಕ ಈ ವಿಚಾರ ತಿಳಿದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೋಟೆಲ್‌ನಲ್ಲಿ ಬಿರಿಯಾನಿಗೆ ನಿಜಕ್ಕೂ ನಾಯಿ ಮಾಂಸ ಬೆರೆಸಲಾಗತ್ತೋ? ಇಲ್ಲವೋ ಎಂಬುವುದು ಸೂಕ್ತ ತನಿಖೆಯ ಬಳಿಕವಷ್ಟೇ ಗೊತ್ತಾಗಲಿದೆ.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ಇಬ್ಬರ ಸಾವು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Bengaluru Mysuru Expressway) ಸೋಮವಾರ ಭೀಕರ ಅಪಘಾತ (Road Accident) ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ (Road divider) ಡಿಕ್ಕಿಯಾಗಿ ಮತ್ತೊಂದು ಬದಿಯಲ್ಲಿ ಸಾಗುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ವೇಳೆ ತೀವ್ರ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮಸೂದ್ ಹಾಗೂ ಅಯಾನ್ ಎಂಬವರು ಮೃತಪಟ್ಟಿದ್ದಾರೆ. ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಎಂಬವರು ಗಂಭೀರ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. ಅಪಘಾತದ ಬಳಿಕ ಹೈವೇ ರಸ್ತೆಯನ್ನು ಬಂದ್ ಮಾಡಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಬೆಂಗಳೂರಿನಲ್ಲಿ ಅಪಘಾತ, ಮಹಿಳೆ ಸಾವು

ಬೆಂಗಳೂರು ನಗರದಲ್ಲೇ ಸಂಭವಿಸಿದ ಮತ್ತೊಂದು ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಮೆಯೋಹಾಲ್ ಜಂಕ್ಷನ್‌ನಲ್ಲಿ ನಿಂತಿದ್ದ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಮುಂದೆ ಇದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಬೈಕ್‌ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಅಂಜಲಿ (36) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Laxman Savadi: ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಕಾರು ಅಪಘಾತ; ಅಪಾಯದಿಂದ ಪಾರು

ಅಪಘಾತದಲ್ಲಿ ಬೈಕ್‌ನಲ್ಲಿದ್ದ ವಿಜಯ್ ಕುಮಾರ್ ಅವರಿಗೆ ಗಂಭೀರವಾಗಿ ಗಾಯವಾಗಿದೆ. ವಿಜಯ್ ಕುಮಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಅಶೋಕನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »