Karunadu Studio

ಕರ್ನಾಟಕ

SpiceJet Flight: ತಿರುಪತಿಗೆ ತೆರಳುತ್ತಿದ್ದ ಸ್ಪೈಸ್‌ ಜೆಟ್‌ ತುರ್ತು ಭೂಸ್ಪರ್ಶ! – Kannada News | SpiceJet’s Tirupati bound flight encounters electrical issue mid-air


ಹೈದರಾಬಾದ್‌: ದೇಶದಲ್ಲಿ ಆಗಾಗ ತಾಂತ್ರಿಕ ದೋಷಗಳಿಂದ ಹೈದರಾಬಾದ್ ನಿಂದ ತಿರುಪತಿಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ನ Q400 ವಿಮಾನ(SpiceJet Flight) ತುರ್ತು ಭೂಸ್ಪರ್ಶ ಮಾಡಿದೆ. ಟೇಕ್ ಆಫ್ ಆದ ಕೆಲವೇ ಕೆಲವು ಸಮಯದ ನಂತರ, ವಿಮಾನದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಪೈಲಟ್ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಿಂತಿರುಗಲು ನಿರ್ಧರಿಸಿದರು. ಪೈಲಟ್‌ ಸಮಯಪ್ರಜ್ಞೆಯಿಂದ ವಿಮಾನ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಅದೃಷ್ಟವಶಾತ್‌ ಭಾರೀ ಅವಘಡವೊಂದು ತಪ್ಪಿದೆ.

ಸ್ಪೈಸ್‌ ಜೆಟ್‌ ವಕ್ತಾರ ಈ ಬಗ್ಗೆ ಮಾಹಿತಿ ನೀಡಿದ್ದು, ವಿಮಾನ ಸುರಕ್ಷಿತವಾಗಿ ಇಳಿಯಿತು ಮತ್ತು ಎಲ್ಲಾ ಪ್ರಯಾಣಿಕರನ್ನು ಸಾಮಾನ್ಯವಾಗಿ ಕೆಳಗಿಳಿಸಲಾಯಿತು. ಪ್ರಯಾಣಿಕರಿಗಾಗಿ ಪರ್ಯಾಯ ವಿಮಾನವನ್ನು ವ್ಯವಸ್ಥೆ ಮಾಡಲಾಯಿತು ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನೂ ಓದಿ: Viral Video: ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆದ ಡಿಜಿಟಲ್‍ ಕ್ಲಾಕ್ ಟವರ್‌; ಏನಿದು ವೈರಲ್‌ ಸ್ಟೋರಿ!

ಇಂದು, ಹೈದರಾಬಾದ್-ತಿರುಪತಿ ನಡುವೆ ಹಾರಾಟ ನಡೆಸಿದ್ದ ಸ್ಪೈಸ್ ಜೆಟ್ Q400 ವಿಮಾನವು ಟೇಕ್ ಆಫ್ ಆದ ನಂತರ AFT ಬ್ಯಾಗೇಜ್ ಬಾಗಿಲ ಬಲಿ ತಾಂತ್ರಿಕ ಸಮಸ್ಯೆ ಉಂಟಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ, ಪೈಲಟ್‌ಗಳು ಹೈದರಾಬಾದ್‌ಗೆ ಹಿಂತಿರುಗಲು ನಿರ್ಧರಿಸಿದರು. ವಿಮಾನ ಸುರಕ್ಷಿತವಾಗಿ ಲ್ಯಾಂಡ್‌ ಆಗಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ವಿಮಾನ ತುರ್ತು ಲ್ಯಾಂಡಿಂಗ್ ಮಾಡಲಿಲ್ಲ. ತಿರುಪತಿಗೆ ಮುಂದಿನ ಪ್ರಯಾಣಕ್ಕೆ ಪರ್ಯಾಯ ವಿಮಾನವನ್ನು ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ, ”ಎಂದು ಸ್ಪೈಸ್ ಜೆಟ್ ವಕ್ತಾರರು ತಿಳಿಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »