Karunadu Studio

ಕರ್ನಾಟಕ

Nandi Hills: ನಂದಿ ಬೆಟ್ಟ ಸೇರಿದಂತೆ ಸುತ್ತಲಿನ ತಾಣಗಳಿಗೆ 4 ದಿನ ಪ್ರವಾಸಿಗರಿಗೆ ನಿರ್ಬಂಧ; ಜಿಲ್ಲಾಡಳಿತ – Kannada News | Public restricted from visiting tourist spots including Nandi Hills for 4 days


ಚಿಕ್ಕಬಳ್ಳಾಪುರ: ನಂದಿ ಬೆಟ್ಟದಲ್ಲಿ(Nandi Hills) ಬುಧವಾರ (ಜುಲೈ 2) ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಜೂನ್ 30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 3ರ ಮಧ್ಯಾಹ್ನ 2 ಗಂಟೆವರೆಗೂ ನಂದಿ ಬೆಟ್ಟ ಹಾಗೂ ಸ್ಕಂದಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ. 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯು ಜುಲೈ 2 ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟದಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು, ಮಂತ್ರಿಗಳು, ಶಾಸಕರುಗಳು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. .ಹೀಗಾಗಿ, ಮುಂಜಾಗೃತಾ ಕ್ರಮವಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ಜೂನ್ 30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 3ರ ಮಧ್ಯಾಹ್ನ 2 ಗಂಟೆವರೆಗೂ ನಂದಿ ಬೆಟ್ಟ ಹಾಗೂ ಸ್ಕಂದಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಿದ್ದಾರೆ.

ನಂದಿ ಬೆಟ್ಟದ ಮೇಲೆ ಇರುವ ಅತಿಥಿಗೃಹಗಳನ್ನು ಬಂದ್‌ ಮಾಡಲಾಗಿದೆ. ನಂದಿ ಬೆಟ್ಟಕ್ಕೆ ಹೋಗಲು ಹಾಗೂ ಬರಲು ಒಂದೇ ರಸ್ತೆ ಇದ್ದು ವಾಹನ ದಟ್ಟಣೆ ಹೆಚ್ಚಾಗುತ್ತದೆ. ಬೆಟ್ಟಕ್ಕೆ ತೆರಳುವ ರಸ್ತೆ ಸಂಪೂರ್ಣ ತಿರುವಿನಿಂದ ಕೂಡಿದೆ. ಈ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಕಷ್ಟ ಸಾದ್ಯ, ಈ ಹಿನ್ನೆಲೆಯಲ್ಲಿ ಪೊಲೀಸರು ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಹೀಗಾಗಿ, ನಿರ್ಬಂಧ ವಿಧಿಸಲಾಗಿದೆ.

ಇನ್ನು ಪ್ರವಾಸಿಗರ ಮತ್ತೊಂದು ನೆಚ್ಚಿನ ತಾಣ ಸ್ಕಂದಗಿರಿಗೂ ಈ ನಿಯಮ ಅನ್ವಯವಾಗುತ್ತದೆ. ಸಂಪುಟ ಸಭೆ ಇರುವುದರಿಂದ ಬಹುನಂದೀಶ್ವರ ದೇವಾಲಯಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನೀಡಲಾಗುತ್ತಿಲ್ಲ.

ಈ ಸುದ್ದಿಯನ್ನೂ ಓದಿ: MLA K H PuttaswamyGowda: ಮುಖ್ಯಮಂತ್ರಿಗಳ ಎದುರು ಮೂರು ಬೇಡಿಕೆ ಈಡೇರಿಸಲು ಮನವಿ ಮಾಡುವೆ: ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ.

ಜೂನ್ 18ರಂದು ಬೆಳಗ್ಗೆ 11 ಗಂಟೆಗೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಭೆಯನ್ನು ರದ್ದು ಮಾಡಲಾಗಿತ್ತು. ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂಗರ ಜಿಲ್ಲೆಗಳ ವ್ಯಾಪ್ತಿಯ ಕೆಲವು ಇಲಾಖೆಗಳಿಂದ ಪ್ರಸ್ತಾವನೆಗಳು ತಲುಪಿರಲಿಲ್ಲ. ಅಲ್ಲದೇ ಇದಕ್ಕೆ ಬೇಕಾದ ಮಂಜೂರಾತಿಯೂ ಸಿಗದ ಕಾರಣ ದಿಢೀರ್‌ ಎಂದು ಸಚಿವ ಸಂಪುಟ ಸಭೆಯನ್ನು ರದ್ದುಗೊಳಿಸಿ ಬೆಂಗಳೂರಿನ ವಿಧಾನಸೌಧಕ್ಕೆ ಸ್ಥಳಾಂತರಿಸಲಾಗಿತ್ತು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »